Wednesday, July 8, 2026
Wednesday, July 8, 2026

ಧಾರ್ಮಿಕ ಸಾಮರಸ್ಯ ಕಾಪಾಡಲು ಸಾಹಿತಿಗಳ ಮನವಿ

Date:

ರಾಜ್ಯದಲ್ಲಿ ಧರ್ಮ ಸಂಘರ್ಷ ಮುಂದುವರಿದಿದೆ.
ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವುದು ಸರಿಯಲ್ಲ. ಮುಸ್ಲಿಂ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ 61 ಸಾಹಿತಿಗಳು ಪತ್ರ ಬರೆದಿದ್ದಾರೆ.

ಡಾ.ಕೆ.ಮರುಳ ಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ರೆಹಮತ್ ತರಿಕೆರೆ ಸೇರಿ ಒಟ್ಟು 61 ಸಾಹಿತಿಗಳು ಈ ಸಂಬಂಧ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಸಮವಸ್ತ್ರದೊಂದಿಗೆ ಹಿಜಾಬ್‍ಗೂ ಅವಕಾಶ ಕೊಡಿ, ಪಠ್ಯದಲ್ಲಿ ಭಗವದ್ಗೀತೆಗಿಂತ ಸಂವಿಧಾನವನ್ನು ಓದುವುದು ಅತ್ಯಗತ್ಯ. ಹೀಗಾಗಿ ಭಗವದ್ಗೀತೆಯನ್ನು ಪಠ್ಯದಲ್ಲಿ ಕೈಬಿಡುವಂತೆ ಹಾಗೂ ಸಮವಸ್ತ್ರದ ಭಾಗವಾಗಿಯೇ ಶಿರವಸ್ತ್ರ ಧರಿಸಿ ಪರೀಕ್ಷೆಗೆ ಅನುಮತಿಸಿ. ಸದ್ಯ ಇರುವ ವಸ್ತ್ರಸಂಹಿತೆ ಸುತ್ತೋಲೆ ಅವೈಜ್ಞಾನಿಕ, ಹಿಂತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ನಿಷೇಧ ಸರಿಯಲ್ಲ. ಎಲ್ಲ ಜಾತ್ರೆ, ಉತ್ಸವಗಳು ಒಂದು ಧರ್ಮದ, ಜಾತಿಯ ಉತ್ಸವಗಳಾಗಿ ಜಾತ್ರೆ ನಡೆಯಲ್ಲ. ಸಾಮರಸ್ಯದ ನಾಡಿನಲ್ಲಿ ಮುಸ್ಲಿಂ ವರ್ತಕರ ಬಹಿಷ್ಕಾರ ಅಸಂವಿಧಾನಿಕ ನಡೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...