Friday, October 4, 2024
Friday, October 4, 2024

ಶರಾವತಿ ಸಂತ್ರಸ್ತರಿಗೆ ಭೂಮಿ ಮಂಜೂರಾತಿ ನೀಡಲು ಮನವಿ

Date:

ಮಲೆನಾಡು ರೈತ ಹೋರಾಟ ಸಮಿತಿ ಶಿವಮೊಗ್ಗ ಜಿಲ್ಲೆ ವತಿಯಿಂದ ಸೊರಬ ತಾಲ್ಲೂಕು ಕಛೇರಿ ತಹಶೀಲ್ದಾರ್ ಅವರಿಗೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಮಂಜೂರಾತಿ ಮಾಡಲು ಮನವಿ ಪತ್ರ ಸಲ್ಲಿಸಲಾಯಿತು.

ಶರಾವತಿ ವಿದ್ಯುತ್ ಯೋಜನೆಗೆ ಭೂಮಿ ಬಿಟ್ಟುಕೊಟ್ಟು 60 ವರ್ಷಗಳು ಕಳೆದಿವೆ. ಸೊರಬ ತಾಲೂಕಿನ ಕಾನಳ್ಳಿ ಹೊಳೆಕೊಪ್ಪ ಮೈಸಾವಿ ಗ್ರಾಮಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ಶರಾವತಿ ಮುಳುಗಡೆ ಸಂತ್ರಸ್ತ ಕುಟುಂಬಗಳಿವೆ.
2021 ಮಾರ್ಚ್ ನಲ್ಲಿ ರಾಜ್ಯ ಹೈಕೋರ್ಟ್ ರಾಜ್ಯ ಸರ್ಕಾರ 9600 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ವರ್ಗಾಯಿಸುವುದನ್ನು ವಚ ಮಾಡಿರುವುದಾಗಿ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಒಂದು ವರ್ಷ ಸಮಯವಾದರು ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿಲ್ಲ. ಎನ್ನುವ ವಿಚಾರವನ್ನು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಹದಿನೈದು ದಿನಗಳ ಒಳಗೆ ಮಲೆನಾಡು ರೈತ ಹೋರಾಟ ಸಮಿತಿಯ ಕೆಲವು ಬೇಡಿಕೆಗಳನ್ನು ಈಡೇರಿಸದಿದ್ದರೆ ಶಿಕಾರಿಪುರದಲ್ಲಿ ಸಂಸತ್ ಸದಸ್ಯರ ಮನೆಯೆದುರು ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವರ ಕಚೇರಿ ಎದುರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದರೊಂದಿಗೆ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಅರಣ್ಯ ಭೂಮಿ ಸಾಗುವಳಿ ಕುರಿತ ಹೋಗಿದ್ದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಲಾಯಿತು.
ಮಲೆನಾಡು ರೈತ ಹೋರಾಟ ಸಮಿತಿ ಸಾಗರದ ಸಂಚಾಲಕರಾದ ತೀ.ನಾ. ಶ್ರೀನಿವಾಸನವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...