Thursday, August 13, 2026
Thursday, August 13, 2026

ರಾಹುಲ್ ಗಾಂಧಿ ಸಿದ್ಧಗಂಗಾ ಮಠಕ್ಕೆ ಭೇಟಿ

Date:

ಸಿದ್ಧಗಂಗಾ ಮಠಕ್ಕೆ ಮಾರ್ಚ್ 31ರಂದು ಕಾಂಗ್ರೆಸ್ ಮುಖಂಡರ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.

ಸ್ವಾಗತಕ್ಕೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ.

ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮ ಏ.
1ರಂದು ನಡೆಯಲಿದ್ದು, ಅದಕ್ಕೂ ಮೊದಲೇ ಮಾರ್ಚ್ 31ರಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಠಕ್ಕೆ ಭೇಟಿ ನೀಡಲಿದ್ದಾರೆ.

ಮಠದಲ್ಲಿ ಸ್ವಾಮೀಜಿ ಆಶೀರ್ವಾದ ಪಡೆಯುವುದನ್ನು ಹೊರತುಪಡಿಸಿದರೆ ಬೇರೆ ಯಾವುದೇ ಸಭೆ, ಸಮಾರಂಭ ಇರುವುದಿಲ್ಲ. ಕಾರ್ಯಕರ್ತರ ಸಭೆಯೂ ಇರುವುದಿಲ್ಲ. ಮಠದ ಭೇಟಿ ನಂತರ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನಿಂದ ರಸ್ತೆ ಮೂಲಕ ಮಠಕ್ಕೆ ಬರಲಿದ್ದಾರೆ. ಅಲ್ಲಲ್ಲಿ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ. ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಸ್ವಾಗತಿಸಿ, ಮಠಕ್ಕೆ ಕರೆದುಕೊಂಡು ಹೋಗಲಾಗುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಿಂದೆ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈಗ ರಾಹುಲ್ ಗಾಂಧಿ ಬರುತ್ತಿದ್ದಾರೆ. ಸ್ವಾಮೀಜಿ ಮೇಲಿನ ಗೌರವದಿಂದ ಆಗಮಿಸುತ್ತಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಭೇಟಿಗೆ ಯಾವುದೇ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಮಠದ ಭಕ್ತರಾಗಿ ಬರುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...