Friday, October 4, 2024
Friday, October 4, 2024

ಶ್ರೀಲಂಕಾ- ಭಾರತ ದ್ವಿಪಕ್ಷೀಯ ಅಭಿವೃದ್ಧಿ ಸಭೆ 6 ಒಪ್ಪಂದಗಳಿಗೆ ಸಹಿ

Date:

ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ ನಿಟ್ಟಿನಲ್ಲಿ 6 ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ.

ಶ್ರೀಲಂಕಾ ರಾಜಧಾನಿ ಕೊಲೊಂಬೋದಲ್ಲಿ 18ನೇ ಬಂಗಾಲ ಕೊಲ್ಲಿ ಬಹು ಕ್ಷೇತ್ರೀಯ ತಾಂತ್ರಿಕ ಮತ್ತು ಆರ್ಥಿಕ ಸಹ ಕಾರ ಒಕ್ಕೂಟ (ಬಿಮ್‌ಸ್ಟೆಕ್‌)ರಾಷ್ಟ್ರಗಳ ಸಚಿವರ ಸಭೆಯ ವೇಳೆ ಈ ಒಪ್ಪಂದಗಳು ನಡೆದಿವೆ.

ಮೂರು ದ್ವೀಪಗಳಲ್ಲಿ ಹೈಬ್ರಿಡ್‌ ವಿದ್ಯುತ್‌ ಯೋಜನೆಗಳು, ಮೀನುಗಾರಿಕೆಗೆ ಅನುಕೂಲವಾಗುವಂಥ ಬಂದರುಗಳ ಅಭಿವೃದ್ಧಿ, ಗಾಲೆ ಜಿಲ್ಲೆಯಲ್ಲಿನ 200 ಶಾಲೆಗಳಿಗೆ ಆಧುನಿಕ ಕಂಪ್ಯೂಟರ್‌ ಲ್ಯಾಬ್‌ಗಳು ಮತ್ತು ಪಠ್ಯಕ್ರಮ ಅಭಿವೃದ್ಧಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಇದಲ್ಲದೆ ವಿದೇಶಾಂಗ ಸಚಿವಾಲಯ ಭಾಗವೇ ಆಗಿರುವ ಸುಷ್ಮಾ ಸ್ವರಾಜ್‌ ಇನ್‌ಸ್ಟಿಟ್ಯೂಟ್‌ ಆಫ್ ಫಾರಿನ್‌ ಸರ್ವಿಸ್‌ ಮತ್ತು ದ್ವೀಪರಾಷ್ಟ್ರದ ಭಂಡಾರ ನಾಯಕೆ ಇಂಟರ್‌ನ್ಯಾಶನಲ್‌ ಡಿಪ್ಲೊಮ್ಯಾ ಟಿಕ್‌ ಟ್ರೈನಿಂಗ್‌ ಇನ್‌ಸ್ಟಿಟ್ಯೂಟ್‌ ನಡುವೆ ಪ್ರತ್ಯೇಕ ಒಪ್ಪಂದವೂ ನಡೆದಿವೆ ಎನ್ನಲಾಗಿದೆ.

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರು ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜ ಪಕ್ಸ, ಪ್ರಧಾನಿ ಮಹಿಂದಾ ರಾಜಪಕ್ಸ ವಿವಿಧ ಸಚಿವರ ಜತೆಗೆ ಮಾತುಕತೆ ನಡೆಸಿದ್ದಾರೆ.

ಉಗ್ರವಾದ, ಹಿಂಸಾತ್ಮಕವಾಗಿರುವ ತೀವ್ರಗಾಮಿತ್ವದ ವಿರುದ್ಧ ಬಿಮೆಸ್ಟೆಕ್‌ ರಾಷ್ಟ್ರಗಳು ಸಂಘಟಿತವಾಗಿ ಹೋರಾಟ ನಡೆಸಬೇಕು ಎಂದು ಜೈಶಂಕರ್‌ ಅಭಿಪ್ರಾಯಪಟ್ಟಿದ್ದಾರೆ.

ಸಭೆಯಲ್ಲಿ ಮಾತನಾಡುತ್ತಾ, ಭಯೋತ್ಪಾದನೆ ಮತ್ತು ತೀವ್ರಗಾಮಿತ್ವವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಅದನ್ನು ತಡೆಯಲು ಒಕ್ಕೂಟದ ಸದಸ್ಯ ರಾಷ್ಟ್ರಗಳು, ಒಗ್ಗೂಡಿ ದುಡಿಯಬೇಕಾಗಿದೆ ಎಂದಿದ್ದಾರೆ.

ಉಕ್ರೇನ್‌ ಬಿಕ್ಕಟ್ಟಿನ ಕುರಿತು ಪ್ರಸ್ತಾವಿಸಿದ ಅವರು, ಅಂತಾರಾಷ್ಟ್ರೀಯ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳುವುದರಲ್ಲಿ ಯಾವುದೇ ರೀತಿ ರಾಜಿ ಮಾಡಿಕೊಳ್ಳಬಾರದು. ಅಂತಾರಾಷ್ಟ್ರೀಯ ವ್ಯವಸ್ಥೆ ಸದ್ಯ ಅತ್ಯಂತ ಸವಾಲಿನ ಸ್ಥಿತಿಯನ್ನು ಎದುರಿಸುತ್ತಿದೆ. ಈಗಷ್ಟೇ ಜಗತ್ತಿನಲ್ಲಿ ಕೊರೊನಾ ಬಿಕ್ಕಟ್ಟು ಕೊನೆಗೊಳ್ಳುತ್ತಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಅಂತಾ ರಾಷ್ಟ್ರೀಯ ಬಿಕ್ಕಟ್ಟು ಸೃಷ್ಟಿಗೆ ಕಾರಣವಾಗಿದೆ ಎಂದಿದ್ದಾರೆ.

ರಾಷ್ಟ್ರಗಳ ನಡುವೆ ಬಹು ಮುಖ್ಯವಾಗಿ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಉತ್ತಮ ರೀತಿಯದ್ದಾಗಿರುವ ಬಾಂಧವ್ಯ ಹೊಂದಿರ ಬೇಕಾದದ್ದೂ ಅಗತ್ಯವೆಂದು ಜೈಶಂಕರ್‌ ಪ್ರತಿಪಾದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...