Sunday, December 7, 2025
Sunday, December 7, 2025

ಕರ್ನಾಟಕ ವಿವಿಯಲ್ಲಿ ಕವಿ ಕಣವಿ ಸ್ಮಾರಕ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಯೋಜನೆ

Date:

ಕವಿ, ನಾಡೋಜ ದಿವಂಗತ ಡಾ. ಚೆನ್ನವೀರ ಕಣವಿ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‍ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಚಿನ್ನದ ಪದಕಗಳನ್ನು ಸ್ಥಾಪಿಸಲಾಗುವುದು ಎಂದು ಚೆನ್ನವೀರ ಕಣವಿ ಪುತ್ರಿ ಪ್ರಿಯದರ್ಶಿ ಕಣವಿ ಹೇಳಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 93 ವರ್ಷದ ಡಾ. ಚೆನ್ನವೀರ ಕಣವಿ ಚಿಕಿತ್ಸೆ ಫಲಕಾರಿಯಾಗದೇ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಫೆಬ್ರವರಿ 16ರಂದು ಮೃತಪಟ್ಟಿದ್ದರು.

ಸರ್ಕಾರ ಅವರ ಚಿಕಿತ್ಸಾ ವೆಚ್ಚ ಭರಿಸಿದ ಕಾರಣ ಕುಟುಂಬವು ಭರಿಸಲು ಸಿದ್ಧವಿದ್ದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಕೆ ಮಾಡಲು ತೀರ್ಮಾನಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತರನ್ನು ಪ್ರೋತ್ಸಾಹಿಸಲು ಕರ್ನಾಟಕ ವಿವಿ ಹಾಗೂ ಎಸ್‍ಡಿಎಂ ಡೀಮ್ಡ್ ವಿವಿಯಲ್ಲಿ ನಿಧಿ ಸ್ಥಾಪನೆ ಮಾಡಿ, ವಿದ್ಯಾರ್ಥಿಗಳಿಗೆ ಸ್ವರ್ಣಪದಕಗಳನ್ನು ನೀಡಲು ಕುಟುಂಬದ ಸದಸ್ಯರು ತೀರ್ಮಾನಿಸಿದ್ದಾರೆ.

ಡಾ. ಚನ್ನವೀರ ಕಣವಿ ಅವರ ಆರೋಗ್ಯ ಹದಗೆಟ್ಟ ಸಂದರ್ಭದಲ್ಲಿ ಅವರಿಗಾಗಿ ಮಿಡಿದ ನಾಡಿನ ಸಮಸ್ತ ಜನತೆಗೆ, ಮಾಧ್ಯಮಗಳಿಗೆ, ಮಠಾಧೀಶರಿಗೆ ಕೃತಜ್ಞತೆಗಳನ್ನು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಡಾ. ಚೆನ್ನವೀರ ಕಣವಿ ಅವರು ತೀವ್ರ ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಹಾಲಪ್ಪ ಆಚಾರ್, ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಎಸ್‍ಡಿಎಂ ಆಸ್ಪತ್ರೆಯ ನಿರ್ದೇಶಕರು, ವೈದ್ಯರು, ಸಿಬ್ಬಂದಿ ನೀಡಿದ ಸಹಕಾರ, ತುಂಬಿದ ನೈತಿಕ ಸ್ಥೈರ್ಯಕ್ಕೆ ಕುಟುಂಬ ಚೆನ್ನವೀರ ಕಣವಿ ಕುಟುಂಬ ಸದಸ್ಯರು ಧನ್ಯವಾದ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...