Saturday, May 9, 2026
Saturday, May 9, 2026

ಕರ್ನಾಟಕ ವಿವಿಯಲ್ಲಿ ಕವಿ ಕಣವಿ ಸ್ಮಾರಕ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಯೋಜನೆ

Date:

ಕವಿ, ನಾಡೋಜ ದಿವಂಗತ ಡಾ. ಚೆನ್ನವೀರ ಕಣವಿ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‍ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಚಿನ್ನದ ಪದಕಗಳನ್ನು ಸ್ಥಾಪಿಸಲಾಗುವುದು ಎಂದು ಚೆನ್ನವೀರ ಕಣವಿ ಪುತ್ರಿ ಪ್ರಿಯದರ್ಶಿ ಕಣವಿ ಹೇಳಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 93 ವರ್ಷದ ಡಾ. ಚೆನ್ನವೀರ ಕಣವಿ ಚಿಕಿತ್ಸೆ ಫಲಕಾರಿಯಾಗದೇ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಫೆಬ್ರವರಿ 16ರಂದು ಮೃತಪಟ್ಟಿದ್ದರು.

ಸರ್ಕಾರ ಅವರ ಚಿಕಿತ್ಸಾ ವೆಚ್ಚ ಭರಿಸಿದ ಕಾರಣ ಕುಟುಂಬವು ಭರಿಸಲು ಸಿದ್ಧವಿದ್ದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಕೆ ಮಾಡಲು ತೀರ್ಮಾನಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತರನ್ನು ಪ್ರೋತ್ಸಾಹಿಸಲು ಕರ್ನಾಟಕ ವಿವಿ ಹಾಗೂ ಎಸ್‍ಡಿಎಂ ಡೀಮ್ಡ್ ವಿವಿಯಲ್ಲಿ ನಿಧಿ ಸ್ಥಾಪನೆ ಮಾಡಿ, ವಿದ್ಯಾರ್ಥಿಗಳಿಗೆ ಸ್ವರ್ಣಪದಕಗಳನ್ನು ನೀಡಲು ಕುಟುಂಬದ ಸದಸ್ಯರು ತೀರ್ಮಾನಿಸಿದ್ದಾರೆ.

ಡಾ. ಚನ್ನವೀರ ಕಣವಿ ಅವರ ಆರೋಗ್ಯ ಹದಗೆಟ್ಟ ಸಂದರ್ಭದಲ್ಲಿ ಅವರಿಗಾಗಿ ಮಿಡಿದ ನಾಡಿನ ಸಮಸ್ತ ಜನತೆಗೆ, ಮಾಧ್ಯಮಗಳಿಗೆ, ಮಠಾಧೀಶರಿಗೆ ಕೃತಜ್ಞತೆಗಳನ್ನು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಡಾ. ಚೆನ್ನವೀರ ಕಣವಿ ಅವರು ತೀವ್ರ ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಹಾಲಪ್ಪ ಆಚಾರ್, ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಎಸ್‍ಡಿಎಂ ಆಸ್ಪತ್ರೆಯ ನಿರ್ದೇಶಕರು, ವೈದ್ಯರು, ಸಿಬ್ಬಂದಿ ನೀಡಿದ ಸಹಕಾರ, ತುಂಬಿದ ನೈತಿಕ ಸ್ಥೈರ್ಯಕ್ಕೆ ಕುಟುಂಬ ಚೆನ್ನವೀರ ಕಣವಿ ಕುಟುಂಬ ಸದಸ್ಯರು ಧನ್ಯವಾದ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...