Thursday, August 13, 2026
Thursday, August 13, 2026

ಬಡವರ ಸಬಲೀಕರಣ ಬಡತನದ ವಿರುದ್ಧ ಹೋರಾಟಕ್ಕೆ ಧೈರ್ಯ-ಪ್ರಧಾನಿ

Date:

ಗ್ರಾಮೀಣ ಬಡವರಿಗೆ ಮನೆ ಒದಗಿಸುವ ಅಭಿಯಾನವು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಬದ್ಧತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ರಾಜ್ಯದಲ್ಲಿ ನಿರ್ಮಿಸಲಾದ ಮಧ್ಯಪ್ರದೇಶದ 5 ಲಕ್ಷ 21 ಸಾವಿರ ಮನೆಗಳ ವಾಸ್ತವ ‘ಗೃಹ ಪ್ರವೇಶ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಫಲಾನುಭವಿಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.

ಬಡವರು ಸಬಲೀಕರಣಗೊಂಡರೆ ಬಡತನದ ವಿರುದ್ಧ ಹೋರಾಡುವ ಧೈರ್ಯ ಬರುತ್ತದೆ. ಸರ್ಕಾರ ಮತ್ತು ಬಡವರ ಪ್ರಯತ್ನಗಳು ಒಟ್ಟಿಗೆ ಸೇರಿದಾಗ ಬಡತನ ಹೋಗಲಾಡಿಸಬಹುದು ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮಗಳಲ್ಲಿ ನಿರ್ಮಿಸಲಾದ ಈ 5 ಲಕ್ಷದ 21 ಸಾವಿರ ಮನೆಗಳು ಕೇವಲ ಮನೆಗಳಲ್ಲ. ದೇಶದ ಬಡವರು ಸಬಲರಾಗುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಡವರಿಗೆ ಪಕ್ಕಾ ಮನೆ ನೀಡುವ ಅಭಿಯಾನ ಕೇವಲ ಸರಕಾರದ ಯೋಜನೆಯಾಗದೆ ಗ್ರಾಮಸ್ಥರಲ್ಲಿ ಹಾಗೂ ಬಡವರಲ್ಲಿ ನಂಬಿಕೆ ಮೂಡಿಸುವ ಬದ್ಧತೆಯಾಗಿದೆ ಎಂದರು.

ಬಡತನದ ಸಂಕೋಲೆಯಿಂದ ಹೊರ ಬರಲು ಬಡವರನ್ನು ಪ್ರೋತ್ಸಾಹಿಸಲು ಇದು ಮೊದಲ ಹೆಜ್ಜೆಯಾಗಿದೆ ಎಂದರು.
ದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಮನೆಗಳಲ್ಲಿ ಮಹಿಳೆಯರು ಸುಮಾರು ಎರಡು ಕೋಟಿ ಮನೆಗಳ ಮಾಲೀಕತ್ವವನ್ನು ಹೊಂದಿದ್ದಾರೆ. ಈ ಮಾಲೀಕತ್ವವು ಮನೆಯ ಇತರ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಬಲಪಡಿಸಿದೆ ಎಂದರು.

ಸರ್ಕಾರ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸಲು ಮುಂದಾಗಿದೆ. ಈ ಯೋಜನೆಯಡಿ ಕಳೆದ ಎರಡೂವರೆ ವರ್ಷಗಳಲ್ಲಿ ದೇಶಾದ್ಯಂತ 6 ಕೋಟಿಗೂ ಹೆಚ್ಚು ಕುಟುಂಬಗಳು ಶುದ್ಧ ಕುಡಿಯುವ ನೀರಿನ ಸಂಪರ್ಕ ಪಡೆದಿವೆ.

ಕೊರೊನಾ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಉಚಿತ ಪಡಿತರಕ್ಕಾಗಿ 2 ಲಕ್ಷ 60 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದ್ದು, ಮುಂದಿನ 6 ತಿಂಗಳಲ್ಲಿ 80 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...