Thursday, August 13, 2026
Thursday, August 13, 2026

ಯುದ್ಧ ಕಾರ್ಯಾಚರಣೆ ಕಡಿತಗೊಳಿಸದ ರಷ್ಯಉಕ್ರೇನ್ ಆತಂಕ

Date:

ದಕ್ಷಿಣ ಉಕ್ರೇನ್‌ನ ಮೈಕೊಲೈವ್‌ ಸರ್ಕಾರಿ ಪ್ರಧಾನ ಕಚೇರಿ ಕಟ್ಟಡದ ಮೇಲೆ ರಷ್ಯಾ ಪಡೆಗಳು ಮಂಗಳವಾರ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.ಇದರೊಂದಿಗೆ 33 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

9 ಮಹಡಿ ಕಟ್ಟಡದ ಮೇಲೆ ದಾಳಿ ನಡೆದಿತ್ತು. ಕಟ್ಟಡವು ಸಂಪೂರ್ಣವಾಗಿ ಧ್ವಂಸಗೊಂಡಿದೆ. 12 ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಈ ದಾಳಿಯನ್ನು ಖಂಡಿಸಿದ್ದಾರೆ.
‘ಮೈಕೊಲೈವ್‌ ಜನರಿಂದ ರಷ್ಯಾಕ್ಕೆ ಯಾವುದೇ ಬೆದರಿಕೆ ಇಲ್ಲ. ಕಾರಣವಿಲ್ಲದೆ ಉಕ್ರೇನ್ ಜನರ ಮೇಲೆ ರಷ್ಯಾ ಪಡೆಗಳು ದಾಳಿ ನಡೆಸುತ್ತಿವೆ’ ಎಂದು ಅವರು ಆರೋಪಿಸಿದ್ದಾರೆ.

ಯುದ್ಧ ಕೊನೆಗೊಳಿಸುವ ಉದ್ದೇಶದಿಂದ ಮಾತುಕತೆಗಳಲ್ಲಿ ಪರಸ್ಪರ ನಂಬಿಕೆ ಹೆಚ್ಚಿಸಲು ಉಕ್ರೇನ್‌ ರಾಜಧಾನಿ ಕೀವ್‌ ಮತ್ತು ಇನ್ನೊಂದು ಪ್ರಮುಖ ನಗರ ಚೆರ್ನಿವ್‌ ಬಳಿ ಸೇನಾ ಕಾರ್ಯಾಚರಣೆಗಳನ್ನು ನಿಯಮಿತವಾಗಿ ಕಡಿತಗೊಳಿಸಲು ಮಾಸ್ಕೊ ನಿರ್ಧರಿಸಿದೆ ಎಂದು ರಷ್ಯಾದ ರಕ್ಷಣಾ ಉಪ ಸಚಿವ ಅಲೆಕ್ಸಾಂಡರ್‌ ಫೊಮಿನ್‌ ಹೇಳಿದ್ದರು.
ಅದೇ ದಿನ ಮೈಕೊಲೈವ್‌ ಮೇಲೆ ದಾಳಿ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...