Thursday, February 5, 2026
Thursday, February 5, 2026

ರಾಜ್ಯಸಭಾ ಚುನಾವಣೆ ಕಾಂಗ್ರೆಸ್ ವಿರೋಧಪಕ್ಷ ಸ್ಥಾನಕ್ಕೆ ಚ್ಯುತಿ?

Date:

ಐದು ರಾಜ್ಯಗಳಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸುವುದರೊಂದಿಗೆ ಆರು ರಾಜ್ಯಗಳಾದ್ಯಂತ 13 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕನಿಷ್ಠ ಐದು ಸ್ಥಾನಗಳಲ್ಲಿ ಗೆಲುವಿನ ಮೇಲೆ ಕಣ್ಣಿಟ್ಟಿದೆ.

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಕೇಸರಿ ಪಕ್ಷವು ಪ್ರಸ್ತುತ 97 ಬಲವನ್ನು ಹೊಂದಿದೆ. ಮತ್ತೊಂದೆಡೆ, ಮೇಲ್ಮನೆಗೆ ಮತ್ತೊಂದು ಸುತ್ತಿನ ದ್ವೈವಾರ್ಷಿಕ ಚುನಾವಣೆಗಳು ನಡೆಯಲಿರುವ ಈ ವರ್ಷದ ಜುಲೈ ವೇಳೆಗೆ ಕಾಂಗ್ರೆಸ್ ತನ್ನ ವಿರೋಧ ಪಕ್ಷದ ನಾಯಕನ ಸ್ಥಾನಮಾನವನ್ನು ಕಳೆದುಕೊಳ್ಳುವ ಅಪಾಯದಲ್ಲಿದೆ ಎನ್ನಲಾಗಿದೆ.

ಇನ್ನು ನಿವೃತ್ತರಾಗುತ್ತಿರುವ 72 ಸದಸ್ಯರಿಗೆ ರಾಜ್ಯಸಭೆಯು ವಿದಾಯ ಹೇಳಲಿದ್ದು, ಸಭಾಪತಿ ಎಂ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಸಭಾನಾಯಕ ಪಿಯೂಷ್ ಗೋಯಲ್ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಮಾತನಾಡಿ ಏಳು ನಾಮ ನಿರ್ದೇಶಿತ ಸದಸ್ಯರು ಸೇರಿದಂತೆ ಈ 72 ಸದಸ್ಯರನ್ನು ಬೀಳ್ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ನಾಯಕರು ಮತ್ತು ಸದಸ್ಯರಿಗೆ ಮಾತನಾಡಲು ಅನುಕೂಲವಾಗುವಂತೆ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...