Sunday, December 7, 2025
Sunday, December 7, 2025

ರಾಜ್ಯಸಭಾ ಚುನಾವಣೆ ಕಾಂಗ್ರೆಸ್ ವಿರೋಧಪಕ್ಷ ಸ್ಥಾನಕ್ಕೆ ಚ್ಯುತಿ?

Date:

ಐದು ರಾಜ್ಯಗಳಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸುವುದರೊಂದಿಗೆ ಆರು ರಾಜ್ಯಗಳಾದ್ಯಂತ 13 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕನಿಷ್ಠ ಐದು ಸ್ಥಾನಗಳಲ್ಲಿ ಗೆಲುವಿನ ಮೇಲೆ ಕಣ್ಣಿಟ್ಟಿದೆ.

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಕೇಸರಿ ಪಕ್ಷವು ಪ್ರಸ್ತುತ 97 ಬಲವನ್ನು ಹೊಂದಿದೆ. ಮತ್ತೊಂದೆಡೆ, ಮೇಲ್ಮನೆಗೆ ಮತ್ತೊಂದು ಸುತ್ತಿನ ದ್ವೈವಾರ್ಷಿಕ ಚುನಾವಣೆಗಳು ನಡೆಯಲಿರುವ ಈ ವರ್ಷದ ಜುಲೈ ವೇಳೆಗೆ ಕಾಂಗ್ರೆಸ್ ತನ್ನ ವಿರೋಧ ಪಕ್ಷದ ನಾಯಕನ ಸ್ಥಾನಮಾನವನ್ನು ಕಳೆದುಕೊಳ್ಳುವ ಅಪಾಯದಲ್ಲಿದೆ ಎನ್ನಲಾಗಿದೆ.

ಇನ್ನು ನಿವೃತ್ತರಾಗುತ್ತಿರುವ 72 ಸದಸ್ಯರಿಗೆ ರಾಜ್ಯಸಭೆಯು ವಿದಾಯ ಹೇಳಲಿದ್ದು, ಸಭಾಪತಿ ಎಂ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಸಭಾನಾಯಕ ಪಿಯೂಷ್ ಗೋಯಲ್ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಮಾತನಾಡಿ ಏಳು ನಾಮ ನಿರ್ದೇಶಿತ ಸದಸ್ಯರು ಸೇರಿದಂತೆ ಈ 72 ಸದಸ್ಯರನ್ನು ಬೀಳ್ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ನಾಯಕರು ಮತ್ತು ಸದಸ್ಯರಿಗೆ ಮಾತನಾಡಲು ಅನುಕೂಲವಾಗುವಂತೆ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...