Tuesday, August 25, 2026
Tuesday, August 25, 2026

ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಣೆ

Date:

ದಶಕಗಳಲ್ಲಿಯೇ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದ ಹಿನ್ನಲೆಯಲ್ಲಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಿಸಿದರು.

ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸರಬರಾಜು ಮತ್ತು ಅಗತ್ಯ ಸೇವೆಗಳ ನಿರ್ವಹಣೆ ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ರೀಲಂಕಾ ಸರ್ಕಾರದ ಗೆಜೆಟ್ ಅಧಿಸೂಚನೆಯಲ್ಲಿ ರಾಜಪಕ್ಸೆ ಹೇಳಿದ್ದಾರೆ.

ನೂರಾರು ಪ್ರತಿಭಟನಾಕಾರರು ರಾಜಧಾನಿ ಕೊಲಂಬೊದ ಉಪನಗರದಲ್ಲಿರುವ ಅಧ್ಯಕ್ಷ ರಾಜಪಕ್ಸೆ ಅವರ ನಿವಾಸದ ಹೊರಗೆ ಪೊಲೀಸರು ಮತ್ತು ಮಿಲಿಟರಿಯೊಂದಿಗೆ ಘರ್ಷಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇಂಧನ ಮತ್ತು ಇತರ ಸರಕುಗಳು ಸೇರಿದಂತೆ ಅಗತ್ಯ ವಸ್ತುಗಳ ಕೊರತೆಯ ಕಾರಣ ಭಾರೀ ಪ್ರತಿಭಟನೆಗೆ ಕಾರಣವಾಗಿದೆ.

ಪೊಲೀಸರು 53 ಜನರನ್ನು ಬಂಧಿಸಿ ಕೊಲಂತ್ತಬೊ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...