Tuesday, August 25, 2026
Tuesday, August 25, 2026

ಮಕ್ಕಳು ಮನಸ್ಸನ್ನು ನಿಯಂತ್ರಿಸಿ ಪಾಠ ಕಲಿಯಬೇಕು- ಮೋದೀಜಿ

Date:

ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಕ್ಲಾಸ್ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಕ್ಲಾಸ್ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು‌ ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮೈಸೂರಿನಿಂದ ಏಕೈಕ ವಿದ್ಯಾರ್ಥಿಯಾಗಿ ಭಾಗವಹಿಸಿದ್ದ ಜಿಲ್ಲೆಯ ದೊಡ್ಡ ಮಾರನಗೌಡನಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 11ನೇ ತರಗತಿಯ ವಿದ್ಯಾರ್ಥಿ ಎಂ.ಬಿ. ತರುಣ್ ಅವರು ಶುಕ್ರವಾರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆನ್‌ಲೈನ್ ಪಾಠದಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಡಕುಗಳ ಬಗ್ಗೆ ಪ್ರಶ್ನಿಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಿದರು.

ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಸಲಹೆ ನೀಡಿದರು.

ಆಫ್‌ಲೈನ್ ಪಾಠಕ್ಕಿಂತ ಆನ್‌ಲೈನ್ ಪಾಠ ಎಷ್ಟು ಮುಖ್ಯ ಎಂದು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಆಫ್‌ಲೈನ್ ತರಗತಿ ಒಂದು ನಿಗದಿತ ಸ್ಥಳದಲ್ಲಿ ಮಾತ್ರ ಕಲಿಯಲು ಅವಕಾಶ. ಆದರೆ ಆನ್‌ಲೈನ್ ತರಗತಿಯಿಂದ ಯಾವಾಗ, ಎಲ್ಲಿಬೇಕಾದರೂ ಕಲಿಯಬಹುದು ಎಂದರು.

ಬೃಹತ್ ಎಲ್‌ಇಡಿ ಪರದೆಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು ಮೋದಿ ಜೊತೆಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿ, ಮಕ್ಕಳ ಕಲಿಕೆ, ಪರೀಕ್ಷಾ ಫೋಬಿಯಾ ತಪ್ಪಿಸಲು ಕಾರ್ಯಕ್ರಮ ಸಹಕಾರಿ ಆಗಿತ್ತು, ಪರೀಕ್ಷೆ ಒತ್ತಡ ಕಡಿಮೆ ಮಾಡಲು ಪ್ರಧಾನಿಗಳ ಉತ್ತರ ಸಹಕಾರಿ ಆಗಿತ್ತು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...