Sunday, May 17, 2026
Sunday, May 17, 2026

ವಿವಾದಗಳನ್ನ ದ್ವಿಪಕ್ಷೀಯ ಸಂಧಾನದ ಮೂಲಕ ಪರಿಹರಿಸಿಕೊಳ್ಳೋಣ

Date:

ಕಾಶ್ಮೀರ ಸಮಸ್ಯೆ ಸೇರಿದಂತೆ ಭಾರತದ ಜೊತೆ ಎಲ್ಲ ವಿವಾದಗಳನ್ನು ದ್ವಿಪಕ್ಷೀಯ ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಬಗೆಹರಿಸಿಕೊಳ್ಳಲು ಪಾಕಿಸ್ತಾನ ಬಯಸಿದೆ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಪ್ರಕಟಿಸಿದ್ದಾರೆ.

ಇದರೊಂದಿಗೆ ಅಮೆರಿಕ ಜತೆ ಉತ್ತಮ ಬಾಂಧವ್ಯದ ಸುಧೀರ್ಘ ಇತಿಹಾಸವನ್ನು ಮುಂದುವರಿಸುವ ಹಾಗೂ ಚೀನಾದ ಜತೆ ನಿಕಟ ಸಂಬಂಧ ಹೊಂದಲು ಪಾಕಿಸ್ತಾನ ಬಯಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರವಿವಾರ ನಡೆಯುವ ಅವಿಶ್ವಾಸ ನಿರ್ಣಯದ ಮೇಲಿನ ಮತದಾನದ ಹಿನ್ನೆಲೆಯಲ್ಲಿ ದೇಶದ ಭವಿಷ್ಯದ ವಿದೇಶಾಂಗ ನೀತಿಯ ಸ್ಪಷ್ಟ ಸೂಚನೆ ಇದಾಗಿದೆ ಎಂದು ತಿಳಿದುಬಂದಿದೆ.

ತಾವು ರಷ್ಯಾಗೆ ಭೇಟಿ ನೀಡಿದ ಬಳಿಕ ತಮ್ಮ ಸರ್ಕಾರವನ್ನು ಪದಚ್ಯುತಗೊಳಿಸಲು ಅಮೆರಿಕದ ಸೂಚನೆಯಂತೆ ವಿದೇಶಿ ನೆರವಿನ ಪಿತೂರಿ ನಡೆದಿದೆ ಎಂದು ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದು, ಸೇನಾ ಮುಖ್ಯಸ್ಥರ ಹೇಳಿಕೆ ಇದಕ್ಕೆ ತದ್ವಿರುದ್ಧವಾಗಿದೆ.

ಅಮೆರಿಕ ಜತೆಗಿನ ಸಂಬಂಧವನ್ನು ಮುಂದುವರಿಸುವ ಸುಳಿವನ್ನು ಸೇನಾ ಮುಖ್ಯಸ್ಥರು ನೀಡಿದ್ದಾರೆ. ದೇಶದ ಪೂರ್ವ ಗಡಿ ಮತ್ತು ವಾಸ್ತವ ನಿಯಂತ್ರಣ ರೇಖೆಯಲ್ಲಿನ ಪರಿಸ್ಥಿತಿ ತೃಪ್ತಿದಾಯಕ ಮತ್ತು ಶಾಂತಿಯುತವಾಗಿ ಇರುವುದರಿಂದ ಪಾಕಿಸ್ತಾನ ನಿರಾಳವಾಗಿದೆ ಎಂದು ಜನರಲ್ ಬಾಜ್ವಾ ಹೇಳಿದ್ದಾರೆ.

ವಿಶ್ವದ ಮೂರನೇ ಒಂದರಷ್ಟು ಭಾಗವಾದ ಗಲ್ಫ್ ಪ್ರದೇಶದಲ್ಲಿ ಒಂದಲ್ಲ ಒಂದು ಸಂಘರ್ಷ ಮತ್ತು ಯುದ್ಧ ನಡೆಯುತ್ತಿದ್ದರೆ, ನಮ್ಮ ಪ್ರದೇಶದಿಂದ ಈ ಜ್ವಾಲೆಯ ಹೊಗೆಯನ್ನು ದೂರ ಇಡುವುದು ಅಗತ್ಯಎಂದು ಇಸ್ಲಾಮಾಬಾದ್ ಸೆಕ್ಯುರಿಟಿ ಡಯಲಾಗ್ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಪಾದಿಸಿದರು.

ಕಾಶ್ಮೀರ ಸಮಸ್ಯೆ ಹೊರತಾಗಿ ಪಾಕಿಸ್ತಾನವು ಭಾರತ- ಚೀನಾ ಗಡಿ ವಿವಾದವನ್ನು ಗಂಭೀರವಾಗಿ ಪರಿಗಣಿಸಿದೆ. “ಉಭಯ ದೇಶಗಳ ರಾಜಕೀಯ ಮುಖಂಡರು ಭಾವನಾತ್ಮಕ ಮತ್ತು ಗ್ರಹಿಕೆಯ ಪೂರ್ವಾಗ್ರಹವನ್ನುಬಿಟ್ಟು, ಶಾಂತಿ ಮತ್ತು ಸಮೃದ್ಧತೆಯನ್ನು ಜನರಿಗೆ ತರುವ ಅಗತ್ಯವಿದೆ” ಎಂದು ಬಾಜ್ವಾ ಪ್ರತಿಪಾದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...