Sunday, May 17, 2026
Sunday, May 17, 2026

ತಿನ್ನೋದೇ ಪ್ರಾಣಿವಧೆ ಮಾಡಿ, ಅದರಲ್ಲಿ ಮಾನವತೆ ಪ್ರಶ್ನೆ ಎಲ್ಲಿ?-ದೇವನೂರ

Date:

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ದ್ವೇಷ ಹೆಚ್ಚಿಸಿ ಜನ ಸಮುದಾಯಗಳನ್ನು ಒಡೆಯಲು ಸರ್ಕಾರವೇ ಕುಮ್ಮಕ್ಕು ಕೊಡುತ್ತಿದೆ ಎಂದು ಸಾಹಿತಿ ದೇವನೂರ ಮಹಾದೇವ ಕಿಡಿಕಾರಿದರು.

ಸಕಲೆಂಟು ಜಾತಿ ಸಹಬಾಳ್ವೆ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಮೈಸೂರಿನ ಶಾಂತಿ ನಗರ( ಮಹದೇವ ಪುರ ರಿಂಗ್ ರಸ್ತೆ) ದಲ್ಲಿರುವ ಸೈಯ್ಯದ್ ರಿಜ್ವಾನ್ ಅವರ ಅಂಗಡಿಯಲ್ಲಿ ಶಾಂತಿ ಸೌಹಾರ್ದತೆ, ಸಹಬಾಳ್ವೆಯ ಸಂದೇಶ ಸಾರುವ ಕಾರಣಕ್ಕಾಗಿ ಮಾಂಸ ಖರೀದಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ವೋಟ್ ಬ್ಯಾಂಕಿಗಾಗಿ ಜನರನ್ನು ಒಡೆದು, ದ್ವೇಷವನ್ನು ಎಲ್ಲೆಡೆ ಹಬ್ಬಿಸಿದೆ. ದ್ವೇಷವೇ ಸರ್ಕಾರಕ್ಕೆ ಎನರ್ಜಿ ಡ್ರಿಂಕ್ಸ್ ಆಗಿದೆ ಎಂದರು.

ವಿರೋಧ ಪಕ್ಷಗಳು ಮಂಕಾಗಿ ಕುಳಿತಿರುವ ಈ ಹೊತ್ತಿನಲ್ಲಿ ಎಲ್ಲ ಹದಿನೆಂಟು ಜಾತಿಗಳಲ್ಲೂ ವಿವೇಕ ಇರುವವರು ಮಾತನಾಡಬೇಕು. ಕ್ರಿಯಾಶೀಲರಾಗಬೇಕು ಎಂದು ಕರೆ ನೀಡಿದರು.

ಹಳೆ ಪೇಪರ್, ಖಾಲಿ ಸೀಸ ಕೊಳ್ಳುತ್ತಿದ್ದ ಹೊಟ್ಟೆಪಾಡಿನ ಜನರು ಕಲುಷಿತ ವಾತಾರಣಕ್ಕೆ ಹೆದರಿ ಹೊರಗಡೆ ಕಾಣಿಸುತ್ತಿಲ್ಲ. ಇವರಿಂದ ಪರಿಸರ ಉಳಿಯುತ್ತಿತ್ತು. ಮಠಗಳಲ್ಲಿರುವ ಮರಿಗಳು(ಶಿಷ್ಯಂದಿರು) ಈ ಕೆಲಸ ಮಾಡಲಿ.‌ ಕನಿಷ್ಠ ದೇಶಸೇವೆಯಾದರೂ ಆಗುತ್ತದೆ ಎಂದು ಹೇಳಿದರು.

ಜಾತ್ರೆಗಳಲ್ಲಿ ಮುಸ್ಲಿಮರನ್ನು ನಿಷೇಧಿಸುವ ಮೂಲಕ ಬಡವರ ಹೊಟ್ಟೆಗೆ ಒಡೆಯಲಾಗಿದೆ. ಇದು ಧರ್ಮ ಅಲ್ಲ. ಇಂದು ಧರ್ಮದ ಮುಖವಾಡದಲ್ಲಿ ಅಧರ್ಮವೇ ಕುಣಿದು ಕುಪ್ಪಳಿಸುತ್ತಿದೆ.
ಇದು ಜನಸಮುದಾಯದ ವಿವೇಕವನ್ನು ಕಡಿಮೆ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾಂಸ ತಿನ್ನದವರೇ ಮಾಂಸ ಕತ್ತರಿಸುವುದರ ಬಗ್ಗೆ ಹೆಚ್ಚು ಮಾತನಾಡುತ್ತಿದ್ದಾರೆ. ಹಾಗೆ ಕತ್ತರಿಸಬಾರದು ಹೀಗೆ ಕತ್ತರಿಸಬಾರದು ಎಂದು ಅಪ್ಪಣೆ ಕೊಡಿಸಲು ಅವರು ಯಾರು ಎಂದು ಪ್ರಶ್ನಿಸಿದ ಅವರು ತಿನ್ನೋದೆ ಪ್ರಾಣಿ ವಧೆ ಮಾಡಿ, ಅದರಲ್ಲಿ ಮಾನವತೆ ಪ್ರಶ್ನೆ ಎಲ್ಲಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ...

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...