Monday, May 18, 2026
Monday, May 18, 2026

ಹಿಂದುತ್ವ ಬಲಗೊಳ್ಳಬೇಕಾದರೆ ಅಸ್ಪೃಶ್ಯತೆ ತೊಲಗಬೇಕು

Date:

ಜಾತೀಯತೆಯ ಬೇಧದಿಂದ ಮತಾಂತರ ಪಿಡುಗು ತಲೆದೋರಿದೆ. ಅಸ್ಪೃಶ್ಯತೆ ತೊಲಗಿ ನಾವೆಲ್ಲರೂ ಒಂದು ಎಂಬ ಭಾವ ಮೂಡಿದಾಗ ಹಿಂದುತ್ವ ಬಲಗೊಳ್ಳುತ್ತದೆ ಎಂದು ಪರ್ಯಾವರಣ ಸಂರಕ್ಷಣೆ ಗತಿವಿಧಿಯ ರಾಜ್ಯ ಘಟಕದ ಸಂಚಾಲಕ ಜಯರಾಮ ಬೊಳ್ಳಾಜಿ ಎಂದು ತಿಳಿಸಿದರು.

ಶಿರಸಿಯ ಮಾರಿಕಾಂಬಾ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಯುಗಾದಿ ಉತ್ಸವ ಸಮಿತಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಪರಿಸರದ ವಿರುದ್ಧ ಮನುಷ್ಯ ಹೋದ ಕಾರಣಕ್ಕೆ ಎರಡು ವರ್ಷ ವಿಪ್ಲವ ಅನುಭವಿಸಬೇಕಾಯಿತು.
ಪರಿಸರಕ್ಕೆ ಪೂರಕವಾಗಿ ಬದುಕುವುದನ್ನು ಕಲಿಯಿರಿ ಎಂದರು.

ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಭಗವದ್ಗೀತೆ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಅದರ ಚಿಂತನೆಗಳು ಸಾರ್ವಕಾಲಿಕ, ಸರ್ವಹಿತದಿಂದ ಕೂಡಿದೆ ಎಂದರು.

ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾಜಿ, ಜಾತೀಯತೆಯ ರೋಗದಿಂದ ಹೊರಬೇಕಾಗಿದೆ. ಧರ್ಮ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಗಬೇಕು ಎಂದರು.

ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಕೃಷ್ಣಾನಂದ ಕೊಡಿಯಾ, ಗೌರವಾಧ್ಯಕ್ಷ ಎಂ.ಎಂ.ಭಟ್ ಕಾರೆಕೊಪ್ಪ, ಸಂಚಾಲಕ ಗೋಪಾಲ ದೇವಾಡಿಗ, ಸಲಹೆಗಾರ ರಮೇಶ ದುಬಾಶಿ, ದೀಪಾ ಮಹಾಲಿಂಗಣ್ಣನವರ ಇದ್ದರು.

ಮಾರಿಕಾಂಬಾ ಹೈಸ್ಕೂಲ್ ಮೈದಾನದಿಂದ ಮಾರಿಕಾಂಬಾ ದೇವಸ್ಥಾನದವರೆಗೆ ಭವ್ಯ ಶೋಭಾಯಾತ್ರೆ ನಡೆಯಿತು. 25ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದವು. ಬ್ರಹ್ಮಶ್ರೀ ನಾರಾಯಣಗುರು, ಡಾ.ಶಿವಕುಮಾರ ಸ್ವಾಮೀಜಿ ಅವರ ಸ್ತಬ್ಧಚಿತ್ರಗಳು ಸಾಮಾಜಿಕ ಸಂದೇಶ ಸಾರಿದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ನಿಗದಿತ ಅವಧಿಯೊಳಗೆ ಅತ್ಯಂತ ಗುಣಮಟ್ಟದಲ್ಲಿ ಕಾಮಗಾರಿಗಳನ್ನ ಪೂರ್ಣಗೊಳಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಹಳ್ಳಿ...

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ಜನ ಸಂಪರ್ಕ ಸಭೆ

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ರಂದು...

B.Y. Vijayendra ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ: ಭಂಡತನದ ಪರಾಕಾಷ್ಠತೆ- ಬಿ.ವೈ.ವಿಜಯೇಂದ್ರ

B.Y. Vijayendra ಯಾವ ಮಹತ್ಸಾಧನೆಗಾಗಿ ಕಾಂಗ್ರೆಸ್ ‌ ಸರ್ಕಾರ ಮೂರು ವರ್ಷದ...