Monday, August 24, 2026
Monday, August 24, 2026

ಹಿಂದುತ್ವ ಬಲಗೊಳ್ಳಬೇಕಾದರೆ ಅಸ್ಪೃಶ್ಯತೆ ತೊಲಗಬೇಕು

Date:

ಜಾತೀಯತೆಯ ಬೇಧದಿಂದ ಮತಾಂತರ ಪಿಡುಗು ತಲೆದೋರಿದೆ. ಅಸ್ಪೃಶ್ಯತೆ ತೊಲಗಿ ನಾವೆಲ್ಲರೂ ಒಂದು ಎಂಬ ಭಾವ ಮೂಡಿದಾಗ ಹಿಂದುತ್ವ ಬಲಗೊಳ್ಳುತ್ತದೆ ಎಂದು ಪರ್ಯಾವರಣ ಸಂರಕ್ಷಣೆ ಗತಿವಿಧಿಯ ರಾಜ್ಯ ಘಟಕದ ಸಂಚಾಲಕ ಜಯರಾಮ ಬೊಳ್ಳಾಜಿ ಎಂದು ತಿಳಿಸಿದರು.

ಶಿರಸಿಯ ಮಾರಿಕಾಂಬಾ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಯುಗಾದಿ ಉತ್ಸವ ಸಮಿತಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಪರಿಸರದ ವಿರುದ್ಧ ಮನುಷ್ಯ ಹೋದ ಕಾರಣಕ್ಕೆ ಎರಡು ವರ್ಷ ವಿಪ್ಲವ ಅನುಭವಿಸಬೇಕಾಯಿತು.
ಪರಿಸರಕ್ಕೆ ಪೂರಕವಾಗಿ ಬದುಕುವುದನ್ನು ಕಲಿಯಿರಿ ಎಂದರು.

ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಭಗವದ್ಗೀತೆ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಅದರ ಚಿಂತನೆಗಳು ಸಾರ್ವಕಾಲಿಕ, ಸರ್ವಹಿತದಿಂದ ಕೂಡಿದೆ ಎಂದರು.

ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾಜಿ, ಜಾತೀಯತೆಯ ರೋಗದಿಂದ ಹೊರಬೇಕಾಗಿದೆ. ಧರ್ಮ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಗಬೇಕು ಎಂದರು.

ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಕೃಷ್ಣಾನಂದ ಕೊಡಿಯಾ, ಗೌರವಾಧ್ಯಕ್ಷ ಎಂ.ಎಂ.ಭಟ್ ಕಾರೆಕೊಪ್ಪ, ಸಂಚಾಲಕ ಗೋಪಾಲ ದೇವಾಡಿಗ, ಸಲಹೆಗಾರ ರಮೇಶ ದುಬಾಶಿ, ದೀಪಾ ಮಹಾಲಿಂಗಣ್ಣನವರ ಇದ್ದರು.

ಮಾರಿಕಾಂಬಾ ಹೈಸ್ಕೂಲ್ ಮೈದಾನದಿಂದ ಮಾರಿಕಾಂಬಾ ದೇವಸ್ಥಾನದವರೆಗೆ ಭವ್ಯ ಶೋಭಾಯಾತ್ರೆ ನಡೆಯಿತು. 25ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದವು. ಬ್ರಹ್ಮಶ್ರೀ ನಾರಾಯಣಗುರು, ಡಾ.ಶಿವಕುಮಾರ ಸ್ವಾಮೀಜಿ ಅವರ ಸ್ತಬ್ಧಚಿತ್ರಗಳು ಸಾಮಾಜಿಕ ಸಂದೇಶ ಸಾರಿದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...