ದೇವರು ಎಲ್ಲ ಕಡೆ ಇರುತ್ತಾನೆ. ಆತನ ದಯೆ ಒಂದಿದ್ದರೆ, ಎಂತಹದ್ದೇ ಪರಿಸ್ಥಿತಿ ಎದುರಾದರೂ ಏನೂ ಆಗುವುದಿಲ್ಲ ಎಂಬ ಮಾತನ್ನು ನಾವು ಹಿರಿಯರು ಹೇಳಿರುವುದನ್ನು ಕೇಳಿರುತ್ತೇವೆ. ದೇವರು ಒಂದಲ್ಲ ಒಂದು ರೂಪದಲ್ಲಿ ಬಂದು ಕಾಪಾಡುತ್ತಾನೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ ಇದೆ.
ರಾಜಸ್ಥಾನದ ಕರೌಲಿ ಯಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂಸಾಚಾರದ ತೀವ್ರ ಸ್ವರೂಪದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ವೇಳೆಯಲ್ಲಿ ಒಂದು ಪುಟ್ಟ ಬಾಲಕಿ ಬೆಂಕಿಯಲ್ಲಿ ಸಿಲುಕಿಕೊಂಡಿದ್ದಳು, ಈ ಸಂದರ್ಭದಲ್ಲಿ ಕಾನ್ಸ್ಟೇಬಲ್ ಒಬ್ಬರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಆ ಪುಟ್ಟ ಬಾಲಕಿಯನ್ನು ರಕ್ಷಿಸಿದ್ದಾರೆ. ಪುಟ್ಟ ಬಾಲಕಿಯನ್ನು ಕಾನ್ಸ್ಟೇಬಲ್ ತಮ್ಮ ಕೈಯಲ್ಲಿ ರಕ್ಷಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾನ್ಸ್ಟೇಬಲ್ ಅವರ ಹೆಸರು ನೀತ್ರೆಶ್ ಶರ್ಮಾ (31 ವರ್ಷ) ಪುಟ್ಟ ಬಾಲಕಿಯನ್ನು ಬೆಂಕಿಯಿಂದ ರಕ್ಷಿಸಿ ತಮ್ಮ ಶೌರ್ಯ ವನ್ನು ಪ್ರದರ್ಶಿಸಿದ್ದಾರೆ. ಇವರ ಈ ಸಾಧನೆಗೆ ರಾಜಸ್ಥಾನ ಪೊಲೀಸ್ ಇಲಾಖೆ ಹೆಡ್ ಪೊಲೀಸ್ ಕಾನ್ಸ್ಟೇಬಲ್ ಪದೋನ್ನತಿ ಹುದ್ದೆ ನೀಡಿ ಗೌರವಿಸಿದ್ದಾರೆ.