Friday, February 6, 2026
Friday, February 6, 2026

ತಾಲ್ಲೂಕಿಗೊಂದು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ-ಬೊಮ್ಮಾಯಿ

Date:

ರಾಜ್ಯ ಸರ್ಕಾರವು ಎಸ್ ಸಿ/ಎಸ್ ಟಿ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದೆ.

ಸ್ವಾವಲಂಬಿ ಜೀವನ ನಡೆಸಲು ಬಯಸುವ ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ಪ್ರತಿ ತಾಲ್ಲೂಕಿಗೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮದಿನಾಚರಣೆಯ ಹಾಗೂ ಡಾ: ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ನೆರವಾಗಲೆಂದು ಪ್ರತಿ ತಾಲೂಕಿಕೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ. ತಿಂಗಳೊಳಗೆ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಎಸ್ಸಿ ಎಸ್ಟಿ ಸಮುದಾಯದವರು ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ 1,75,000 ರೂ.ಗಳ ಸಹಾಯಧನವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕುಟಿರ ಯೋಜನೆಯಡಿ ಎಸ್ ಸಿ ಎಸ್ಟಿ ಸಮುದಾಯದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...