Tuesday, April 7, 2026
Tuesday, April 7, 2026

ರಾಯಲ್ ಚಾಲೇಂಜರ್ಸ್ ಗೆ ಜಯದ ನಿಟ್ಟುಸಿರು

Date:

ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 4 ವಿಕೆಟ್ ಜಯ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 15ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್ಗಳ ಜಯ ದಾಖಲಿಸಿತು. ಸೋಲಿನ ಸುಳಿಯಲ್ಲಿ ಸಿಲುಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಭರ್ಜರಿಯಾಗಿ ಬ್ಯಾಟ್ ಬೀಸಿದ ದಿನೇಶ್ ಕಾರ್ತಿಕ್ (44) ಹಾಗೂ ಶಹಬಾಜ್ (45) ಗೆಲುವಿನ ರೂವಾರಿಯಾದರು ಆರ್ಸಿಬಿ ಪಾಲಿಗೆ ಟೂರ್ನಿಯಲ್ಲಿ ಇದು ಸತತ ಎರಡನೇ ಜಯ.

ಮಂಗಳವಾರ ವಾಂಖಡೆ ಸ್ಟೇಡಿಯಂನಲ್ಲಿ ಸೋತು ಬ್ಯಾಟಿಂಗ್ ಆಯ್ಕೆಮಾಡಿಕೊಂಡ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರುಗಳಲ್ಲಿ ಮೂರು ವಿಕೆಟ್ ಗೆ 169 ರನ್ ಗಳಿಸಿತು ಪ್ರತಿಯಾಗಿ ಹಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಓವರ್ಗಳಲ್ಲಿ 6 ವಿಕೆಟ್ಗೆ 173 ರನ್ ಬಾರಿಸಿ ಗೆಲುವಿನ ಸಂಭ್ರಮ ಆಚರಿಸಿತು.
ಆರ್ಸಿಬಿ ಆರಂಭಿಕರಾದ ಫ್ಲಾಫ್ ಡುಪ್ಲೆಸಿಸ್ (29) ಹಾಗೂ ಅನುಜ್ ರವತ್ (26) ಮೊದಲ ವಿಕೆಟ್ ಗೆ 55 ರನ್ ಬಾರಿಸಿ ಉತ್ತಮ ಆರಂಭ ಒದಗಿಸಿಕೊಟ್ಟರು. ಆದರೆ, ವಿರಾಟ್ ಕೊಹ್ಲಿ (5) ಡೇವಿಡ್ ಮಿಲ್ಲಿ (0) ರೋಮರಿಯೊ ಶಫರ್ಡ್ (5) ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರುವ ಮೂಲಕ ತಂಡವನ್ನು ಆತಂಕಕ್ಕೆ ದೂಡಿದರು ಆದರೆ ಅಹಮದ್ ಹಾಗೂ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ ಮೂಲಕ ಗೆಲುವು ತಂದು ಕೊಟ್ಟರು ಹರ್ಷಲ್ ಪಟೇಲ್ ಸಿಕ್ಸರ್ ಸಮೇತ ಅಜೇಯ 9 ರನ್ ಬಾರಿಸಿದರು.

ರಾಜಸ್ಥಾನ ತಂಡದ ಯಜುವೇಂದ್ರ ಚಹಲ್ ಹದಿನೈದು ರನ್ಗಳಿಗೆ ಎರಡು ವಿಕೆಟ್ ಪಡೆದು ಮಿಂಚಿದರು ಉಳಿದವರಿಂದ ಅವರಿಗೆ ಉತ್ತಮ ಸಾಥ್ ಸಿಗಲಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...