Tuesday, April 7, 2026
Tuesday, April 7, 2026

ದೇಶಸೇವೆಯೇ ಬಿಜೆಪಿಯ ಪಯಣದ ಗುರಿ-ಅಮಿತ್ ಶಾ

Date:

ದೇಶಸೇವೆಯೇ ಭಾರತೀಯ ಜನತಾ ಪಾರ್ಟಿಯ ಪಯಣವಾಗಿದೆ. ಕಳೆದ 7 ದಶಕಗಳಿಂದ ಸಮಾಜದ ಬಡವರು, ರೈತರು, ತುಳಿತಕ್ಕೊಳಗಾದವರು ಮತ್ತು ಮಹಿಳೆಯರ ಆಶೋತ್ತರಗಳನ್ನು ಈಡೇರಿಸಲು ಪಕ್ಷ ಕೆಲಸ ಮಾಡುತ್ತಾ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ.

ಇಂದು ಭಾರತೀಯ ಜನತಾ ಪಕ್ಷದ 42ನೇ ಸಂಸ್ಥಾಪನಾ ದಿನ. ಈ ವೇಳೆಯಲ್ಲಿ ಪಕ್ಷದ ಸ್ಥಾಪನೆ, ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಗಳ ಮೂಲಕ ಅಮಿತ್ ಶಾ ಅವರು ತಮ್ಮ ಅಭಿಪ್ರಾಯಗಳನ್ನು ಬರೆದುಕೊಂಡಿದ್ದಾರೆ.

ಪಕ್ಷದ 42ನೇ ಸ್ಥಾಪನಾ ದಿನ ದಂದು ಬಿಜೆಪಿಯನ್ನು ಆಲದ ಮರವನ್ನಾಗಿ ಮಾಡಿದ ಎಲ್ಲ ಮಹಾನ್ ನಾಯಕರಿಗೆ ನಮನಗಳು. ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಜನರ ಕಲ್ಯಾಣ ಮತ್ತು ರಾಷ್ಟ್ರದ ಪ್ರಗತಿಯೊಂದಿಗೆ ಮುನ್ನಡೆಯುತ್ತಿದೆ. ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರುತ್ತೇನೆ ಎಂದು ಶಾ ಅವರು ಬರೆದುಕೊಂಡಿದ್ದಾರೆ.

ಏಳು ದಶಕಗಳಿಂದ ವಂಚಿತರಾಗಿರುವ ದೇಶದ ಕೋಟ್ಯಂತರ ಬಡವರು, ರೈತರು, ದೀನದಲಿತರು ಮತ್ತು ಮಹಿಳೆಯರ ಆಕಾಂಕ್ಷೆಗಳನ್ನು ಈಡೇರಿಸುವ ಮಾಧ್ಯಮವಾಗಿ 2014 ರಿಂದ ಬಿಜೆಪಿ ಶ್ರಮಿಸುತ್ತಿದೆ.

ಬಿಜೆಪಿಯ ಈ 42 ವರ್ಷಗಳ ಪಯಣ ದೇಶಸೇವೆ, ರಾಷ್ಟ್ರೋತ್ಥಾನ ಮತ್ತು ರಾಷ್ಟ್ರೀಯ ಪುನರ್ ನಿರ್ಮಾಣದ ಪಯಣವಾಗಿದೆ. 2014ರಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಯು ಕೋಟ್ಯಂತರ ಬಡವರು, ರೈತರು, ದೀನದಲಿತರು ಮತ್ತು ಮಹಿಳೆಯರ ಆಕಾಂಕ್ಷೆಗಳನ್ನು ಈಡೇರಿಸುವ ಪಕ್ಷವಾಗಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಬಡವರಿಗೆ ಮನೆ, ವಿದ್ಯುತ್, ಗ್ಯಾಸ್, ಶೌಚಾಲಯ, ಬ್ಯಾಂಕ್ ಖಾತೆ, ಆರೋಗ್ಯ ವಿಮೆ ಕಲ್ಪಿಸುವ ಕೆಲಸ ಮಾಡಿದೆ. 2014ರ ಮೊದಲು ಎರಡು ಹೊತ್ತಿನ ಊಟ ಬಡವರ ಪಾಲಿಗೆ ದೊಡ್ಡ ಹೋರಾಟವಾಗಿತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಬಿಜೆಪಿ ಸರ್ಕಾರವು ಮನೆ, ವಿದ್ಯುತ್ ಸಂಪರ್ಕ, ಅಡುಗೆ ಅನಿಲ, ಶೌಚಾಲಯ, ಬ್ಯಾಂಕ್ ಖಾತೆ ಮತ್ತು ಆರೋಗ್ಯ ವಿಮೆಯನ್ನು ಒದಗಿಸುವ ಕೆಲಸ ಮಾಡುತ್ತಿದೆ. ದೇಶದ ಬಡವರಿಗೆ ಸುರಕ್ಷಿತ ಮತ್ತು ಗೌರವಯುತ ಜೀವನಕ್ಕಾಗಿ ಉಚಿತ ಪಡಿತರ ನೀಡುತ್ತಿದೆ ಎಂದು ಶಾ ಅವರು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...