Tuesday, August 25, 2026
Tuesday, August 25, 2026

ದೇಶಸೇವೆಯೇ ಬಿಜೆಪಿಯ ಪಯಣದ ಗುರಿ-ಅಮಿತ್ ಶಾ

Date:

ದೇಶಸೇವೆಯೇ ಭಾರತೀಯ ಜನತಾ ಪಾರ್ಟಿಯ ಪಯಣವಾಗಿದೆ. ಕಳೆದ 7 ದಶಕಗಳಿಂದ ಸಮಾಜದ ಬಡವರು, ರೈತರು, ತುಳಿತಕ್ಕೊಳಗಾದವರು ಮತ್ತು ಮಹಿಳೆಯರ ಆಶೋತ್ತರಗಳನ್ನು ಈಡೇರಿಸಲು ಪಕ್ಷ ಕೆಲಸ ಮಾಡುತ್ತಾ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ.

ಇಂದು ಭಾರತೀಯ ಜನತಾ ಪಕ್ಷದ 42ನೇ ಸಂಸ್ಥಾಪನಾ ದಿನ. ಈ ವೇಳೆಯಲ್ಲಿ ಪಕ್ಷದ ಸ್ಥಾಪನೆ, ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಗಳ ಮೂಲಕ ಅಮಿತ್ ಶಾ ಅವರು ತಮ್ಮ ಅಭಿಪ್ರಾಯಗಳನ್ನು ಬರೆದುಕೊಂಡಿದ್ದಾರೆ.

ಪಕ್ಷದ 42ನೇ ಸ್ಥಾಪನಾ ದಿನ ದಂದು ಬಿಜೆಪಿಯನ್ನು ಆಲದ ಮರವನ್ನಾಗಿ ಮಾಡಿದ ಎಲ್ಲ ಮಹಾನ್ ನಾಯಕರಿಗೆ ನಮನಗಳು. ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಜನರ ಕಲ್ಯಾಣ ಮತ್ತು ರಾಷ್ಟ್ರದ ಪ್ರಗತಿಯೊಂದಿಗೆ ಮುನ್ನಡೆಯುತ್ತಿದೆ. ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರುತ್ತೇನೆ ಎಂದು ಶಾ ಅವರು ಬರೆದುಕೊಂಡಿದ್ದಾರೆ.

ಏಳು ದಶಕಗಳಿಂದ ವಂಚಿತರಾಗಿರುವ ದೇಶದ ಕೋಟ್ಯಂತರ ಬಡವರು, ರೈತರು, ದೀನದಲಿತರು ಮತ್ತು ಮಹಿಳೆಯರ ಆಕಾಂಕ್ಷೆಗಳನ್ನು ಈಡೇರಿಸುವ ಮಾಧ್ಯಮವಾಗಿ 2014 ರಿಂದ ಬಿಜೆಪಿ ಶ್ರಮಿಸುತ್ತಿದೆ.

ಬಿಜೆಪಿಯ ಈ 42 ವರ್ಷಗಳ ಪಯಣ ದೇಶಸೇವೆ, ರಾಷ್ಟ್ರೋತ್ಥಾನ ಮತ್ತು ರಾಷ್ಟ್ರೀಯ ಪುನರ್ ನಿರ್ಮಾಣದ ಪಯಣವಾಗಿದೆ. 2014ರಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಯು ಕೋಟ್ಯಂತರ ಬಡವರು, ರೈತರು, ದೀನದಲಿತರು ಮತ್ತು ಮಹಿಳೆಯರ ಆಕಾಂಕ್ಷೆಗಳನ್ನು ಈಡೇರಿಸುವ ಪಕ್ಷವಾಗಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಬಡವರಿಗೆ ಮನೆ, ವಿದ್ಯುತ್, ಗ್ಯಾಸ್, ಶೌಚಾಲಯ, ಬ್ಯಾಂಕ್ ಖಾತೆ, ಆರೋಗ್ಯ ವಿಮೆ ಕಲ್ಪಿಸುವ ಕೆಲಸ ಮಾಡಿದೆ. 2014ರ ಮೊದಲು ಎರಡು ಹೊತ್ತಿನ ಊಟ ಬಡವರ ಪಾಲಿಗೆ ದೊಡ್ಡ ಹೋರಾಟವಾಗಿತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಬಿಜೆಪಿ ಸರ್ಕಾರವು ಮನೆ, ವಿದ್ಯುತ್ ಸಂಪರ್ಕ, ಅಡುಗೆ ಅನಿಲ, ಶೌಚಾಲಯ, ಬ್ಯಾಂಕ್ ಖಾತೆ ಮತ್ತು ಆರೋಗ್ಯ ವಿಮೆಯನ್ನು ಒದಗಿಸುವ ಕೆಲಸ ಮಾಡುತ್ತಿದೆ. ದೇಶದ ಬಡವರಿಗೆ ಸುರಕ್ಷಿತ ಮತ್ತು ಗೌರವಯುತ ಜೀವನಕ್ಕಾಗಿ ಉಚಿತ ಪಡಿತರ ನೀಡುತ್ತಿದೆ ಎಂದು ಶಾ ಅವರು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...