Wednesday, March 19, 2025
Wednesday, March 19, 2025

ದೇಶಸೇವೆಯೇ ಬಿಜೆಪಿಯ ಪಯಣದ ಗುರಿ-ಅಮಿತ್ ಶಾ

Date:

ದೇಶಸೇವೆಯೇ ಭಾರತೀಯ ಜನತಾ ಪಾರ್ಟಿಯ ಪಯಣವಾಗಿದೆ. ಕಳೆದ 7 ದಶಕಗಳಿಂದ ಸಮಾಜದ ಬಡವರು, ರೈತರು, ತುಳಿತಕ್ಕೊಳಗಾದವರು ಮತ್ತು ಮಹಿಳೆಯರ ಆಶೋತ್ತರಗಳನ್ನು ಈಡೇರಿಸಲು ಪಕ್ಷ ಕೆಲಸ ಮಾಡುತ್ತಾ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ.

ಇಂದು ಭಾರತೀಯ ಜನತಾ ಪಕ್ಷದ 42ನೇ ಸಂಸ್ಥಾಪನಾ ದಿನ. ಈ ವೇಳೆಯಲ್ಲಿ ಪಕ್ಷದ ಸ್ಥಾಪನೆ, ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಗಳ ಮೂಲಕ ಅಮಿತ್ ಶಾ ಅವರು ತಮ್ಮ ಅಭಿಪ್ರಾಯಗಳನ್ನು ಬರೆದುಕೊಂಡಿದ್ದಾರೆ.

ಪಕ್ಷದ 42ನೇ ಸ್ಥಾಪನಾ ದಿನ ದಂದು ಬಿಜೆಪಿಯನ್ನು ಆಲದ ಮರವನ್ನಾಗಿ ಮಾಡಿದ ಎಲ್ಲ ಮಹಾನ್ ನಾಯಕರಿಗೆ ನಮನಗಳು. ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಜನರ ಕಲ್ಯಾಣ ಮತ್ತು ರಾಷ್ಟ್ರದ ಪ್ರಗತಿಯೊಂದಿಗೆ ಮುನ್ನಡೆಯುತ್ತಿದೆ. ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರುತ್ತೇನೆ ಎಂದು ಶಾ ಅವರು ಬರೆದುಕೊಂಡಿದ್ದಾರೆ.

ಏಳು ದಶಕಗಳಿಂದ ವಂಚಿತರಾಗಿರುವ ದೇಶದ ಕೋಟ್ಯಂತರ ಬಡವರು, ರೈತರು, ದೀನದಲಿತರು ಮತ್ತು ಮಹಿಳೆಯರ ಆಕಾಂಕ್ಷೆಗಳನ್ನು ಈಡೇರಿಸುವ ಮಾಧ್ಯಮವಾಗಿ 2014 ರಿಂದ ಬಿಜೆಪಿ ಶ್ರಮಿಸುತ್ತಿದೆ.

ಬಿಜೆಪಿಯ ಈ 42 ವರ್ಷಗಳ ಪಯಣ ದೇಶಸೇವೆ, ರಾಷ್ಟ್ರೋತ್ಥಾನ ಮತ್ತು ರಾಷ್ಟ್ರೀಯ ಪುನರ್ ನಿರ್ಮಾಣದ ಪಯಣವಾಗಿದೆ. 2014ರಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಯು ಕೋಟ್ಯಂತರ ಬಡವರು, ರೈತರು, ದೀನದಲಿತರು ಮತ್ತು ಮಹಿಳೆಯರ ಆಕಾಂಕ್ಷೆಗಳನ್ನು ಈಡೇರಿಸುವ ಪಕ್ಷವಾಗಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಬಡವರಿಗೆ ಮನೆ, ವಿದ್ಯುತ್, ಗ್ಯಾಸ್, ಶೌಚಾಲಯ, ಬ್ಯಾಂಕ್ ಖಾತೆ, ಆರೋಗ್ಯ ವಿಮೆ ಕಲ್ಪಿಸುವ ಕೆಲಸ ಮಾಡಿದೆ. 2014ರ ಮೊದಲು ಎರಡು ಹೊತ್ತಿನ ಊಟ ಬಡವರ ಪಾಲಿಗೆ ದೊಡ್ಡ ಹೋರಾಟವಾಗಿತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಬಿಜೆಪಿ ಸರ್ಕಾರವು ಮನೆ, ವಿದ್ಯುತ್ ಸಂಪರ್ಕ, ಅಡುಗೆ ಅನಿಲ, ಶೌಚಾಲಯ, ಬ್ಯಾಂಕ್ ಖಾತೆ ಮತ್ತು ಆರೋಗ್ಯ ವಿಮೆಯನ್ನು ಒದಗಿಸುವ ಕೆಲಸ ಮಾಡುತ್ತಿದೆ. ದೇಶದ ಬಡವರಿಗೆ ಸುರಕ್ಷಿತ ಮತ್ತು ಗೌರವಯುತ ಜೀವನಕ್ಕಾಗಿ ಉಚಿತ ಪಡಿತರ ನೀಡುತ್ತಿದೆ ಎಂದು ಶಾ ಅವರು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...