Friday, October 4, 2024
Friday, October 4, 2024

ಶ್ರೀಲಂಕಾಗೆ ಭಾರತದಿಂದ 1.5 ಬಿಲಿಯನ್ ಡಾಲರ್ ನೆರವು

Date:

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ಸುಮಾರು 1.5 ಬಿಲಿಯನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್ ನೀಡುತ್ತಿದೆ.

ಆರ್ಥಿಕ ಬಿಕ್ಕಟ್ಟಿನಲ್ಲಿ ತತ್ತರಿಸುತ್ತಿರುವ ಶ್ರೀಲಂಕಾಕ್ಕೆ ಭಾರತವು ತನ್ನ ಆರ್ಥಿಕ ಪ್ಯಾಕೇಜ್ ಅನ್ನು ವಿಸ್ತರಿಸಿದ್ದು, ಅದು ಕೆಲವು ತಕ್ಷಣದ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ಅದರ ದೇಶೀಯ ಆರ್ಥಿಕತೆಯನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ ಎಂದು ಶ್ರೀಲಂಕಾದಲ್ಲಿರುವ ಭಾರತದ ಹೈ ಕಮಿಷನರ್ ಗೋಪಾಲ್ ಬಾಗ್ಲೇ ತಿಳಿಸಿದರು.

ಇಂಧನ ಮತ್ತು ಆಹಾರ ಸಂಗ್ರಹಣೆಗಾಗಿ ಭಾರತವು ಬಿಕ್ಕಟ್ಟು ಪೀಡಿತ ಶ್ರೀಲಂಕಾಕ್ಕೆ ತನ್ನ ನೆರವಿನ ಕ್ರೆಡಿಟ್ ಲೈನ್ಸ್ ಪ್ರಸ್ತುತ ಒಟ್ಟು 1.5 ಶತಕೋಟಿ ಡಾಲರ್ ಗೆ ಏರಿಕೆ ಮಾಡಿದೆ.

ಅಂತೆಯೇ ಸರಕುಗಳ ರವಾನೆ ಮತ್ತಷ್ಟು ಮುಂದುವರಿಯಲಿವೆ ಎಂದು ಶ್ರೀಲಂಕಾದಲ್ಲಿರುವ ಭಾರತದ ಹೈ ಕಮಿಷನರ್ ಗೋಪಾಲ್ ಬಾಗ್ಲೇ ಅವರು ತಿಳಿಸಿದ್ದಾರೆ.

ಭಾರತೀಯ ರಾಯಭಾರಿ ಮೊದಲೇ ತಿಳಿಸಿದ್ದಂತೆ ಈ ವರ್ಷದ ಜನವರಿಯಿಂದ ಶ್ರೀಲಂಕಾಕ್ಕೆ ಭಾರತದಿಂದ ಆರ್ಥಿಕ ನೆರವು 2.5 ಶತಕೋಟಿ ಡಾಲರ್ ಮೀರಿತ್ತು.

ಫೆಬ್ರವರಿಯಲ್ಲಿ ಇಂಧನ ಖರೀದಿಗಾಗಿ 500 ಮಿಲಿಯನ್ ಡಾಲರ್ ಸಾಲಕ್ಕೆ ಸಹಿ ಹಾಕಲಾಗಿತ್ತು. ಮಾರ್ಚ್ ಆರಂಭದಿಂದ, ಒಟ್ಟು 150,000 ಟನ್ಗಳಷ್ಟು ಜೆಟ್ ವಿಮಾನ ಇಂಧನ, ಡೀಸೆಲ್ ಮತ್ತು ಪೆಟ್ರೋಲ್ ಸೇರಿದಂತೆ ಒಟ್ಟು ನಾಲ್ಕು ಸರಕುಗಳು ಶ್ರೀಲಂಕಾಕ್ಕೆ ಬಂದಿವೆ ಎಂದು ಬಾಗ್ಲೇ ಮಾಹಿತಿ ನೀಡಿದ್ದಾರೆ.

ಮೇ ತಿಂಗಳವರೆಗೆ ಇನ್ನೂ ಐದು ರವಾನೆಗಳನ್ನು ಪೂರ್ಣಗೊಳಿಸಿದ್ದು, ಇದರಲ್ಲಿ ಆಹಾರ, ಔಷಧ ಮತ್ತು ಅಗತ್ಯ ವಸ್ತುಗಳ ಮತ್ತೊಂದು ಸಾಲದ 1 ಬಿಲಿಯನ್ ಡಾಲರ್ ಗೆ ಕಳೆದ ತಿಂಗಳು ಸಹಿ ಹಾಕಲಾಗಿದೆ. ಶ್ರೀಲಂಕಾಗೆ 1 ಬಿಲಿಯನ್ ಡಾಲರ್ ಸಾಲವು ಅವರ ಆಹಾರದ ಬೆಲೆಗಳು ಮತ್ತು ಇಂಧನ ವೆಚ್ಚಗಳನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

ಈ ಕ್ರೆಡಿಟ್ ಸೌಲಭ್ಯದ ಅಡಿಯಲ್ಲಿ ಭಾರತದಿಂದ ಅಕ್ಕಿಯ ಮೊದಲ ರವಾನೆಯು ಶ್ರೀಲಂಕಾಕ್ಕೆ ಶೀಘ್ರದಲ್ಲೇ ಆಗಮಿಸುವ ನಿರೀಕ್ಷೆಯಿದೆ ಎಂದು ಬಾಗ್ಲೇ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...