Friday, October 4, 2024
Friday, October 4, 2024

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಹಿಂಪಡೆಯಲಾಗಿದೆ

Date:

ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ ಅಧ್ಯಕ್ಷ ಗೊಟಬಯ ರಾಜಪಕ್ಸ ಯಾವುದೇ ಕಾರಣಕ್ಕೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸರ್ಕಾರ ಪುರುಚ್ಚರಿಸಿದೆ.

ಸರ್ಕಾರದ ಮುಖ್ಯ ವಿಪ್​ ಹಾಗು ಹೆದ್ದಾರಿ ಖಾತೆ ಸಚಿವ ಜಾನ್ಸ್​ಟನ್ ಫೆರ್ನಾಂಡೋ ಈ ವಿಚಾರವಾಗಿ ಮಾತನಾಡಿದರು.

ದ್ವೀಪರಾಷ್ಟ್ರವು ಆರ್ಥಿಕ ದಿವಾಳಿಯಾಗಿದೆ. ಅಗತ್ಯ ವಸ್ತುಗಳಿಗೆ ನಾಗರಿಕರು ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ. ಪರಿಣಾಮ, ರಸ್ತೆಗಿಳಿದು ಸಾವಿರಾರು ಜನರು ಪ್ರತಿಭಟನೆ ನಡೆಸಿದ್ದು ಹಿಂಸಾಚಾರವೂ ನಡೆದಿತ್ತು.

ಹೀಗಾಗಿ ಏ.1ರಂದು ತುರ್ತು ಪರಿಸ್ಥಿತಿ ಜಾರಿಗೊಳಿಸಿ ಅಧ್ಯಕ್ಷ ಗೊಟಬಯ ರಾಜಪಕ್ಸ ಆದೇಶಿಸಿದ್ದರು. ಇದೀಗ ಇದನ್ನು ಹಿಂಪಡೆದು ಗೆಜೆಟ್​ ಅಧಿಸೂಚನೆ​ ಹೊರಡಿಸಲಾಗಿದೆ.

ಸಂಸತ್ತಿನಲ್ಲಿ ರಾಜಪಕ್ಸ ಸಾರಥ್ಯದ ಆಡಳಿತಾರೂಢ ಶ್ರೀಲಂಕಾ ಪೊದುಜನ ಪೆರಮುನಾ ಪಕ್ಷ (ಎಸ್‌ಎಲ್‌ಪಿಪಿ) ಬಹುಮತ ಕಳೆದುಕೊಂಡಿದೆ. ಆದರೂ, ಅಧ್ಯಕ್ಷರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸರ್ಕಾರದ ಮುಖ್ಯ ವಿಪ್​ ಆಗಿರುವ ಹೆದ್ದಾರಿ ಖಾತೆ ಸಚಿವ ಜಾನ್ಸ್​ಟನ್ ಫೆರ್ನಾಂಡೋ ಅವರು ತಿಳಿಸಿದ್ದಾರೆ.

ರಾಜಪಕ್ಸ ಅವರಿಗೆ 6.9 ಮಿಲಿಯನ್​ ಜನರು ಮತ ಹಾಕಿದ್ದಾರೆ. ಈ ವಿಚಾರವನ್ನು ನಾನು ಸರ್ಕಾರದ ಭಾಗವಾಗಿ ಸ್ಪಷ್ಟಪಡಿಸುತ್ತಿದ್ದೇನೆ. ಯಾವುದೇ ಪರಿಸ್ಥಿತಿಯಲ್ಲೂ ಅಧ್ಯಕ್ಷರು ರಾಜೀನಾಮೆ ನೀಡುವುದಿಲ್ಲ. ಏನೇ ಆದರೂ ನಾವು ಅದನ್ನು ಎದುರಿಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Backward Classes Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ...

Klive Special Article ನವರಾತ್ರಿ ಎರಡನೇ ದಿನ.ದೇವಿಯ ಶ್ರೀಬ್ರಹ್ಮಚಾರಿಣಿ ರೂಪದಲ್ಲಿ ಆರಾಧನೆ. ...

Klive Special Article "ದಧಾನಾಂ ಕರಪದ್ಮಾಭ್ಯಾಂಅಕ್ಷಮಾಲಾ ಕಮಂಡಲೂ/ದೇವಿ ಪ್ರಸೀದತು ಮಯಿಬ್ರಹ್ಮಚಾರಿಣ್ಯನುತ್ತಮಾ//ಮೊದಲನೆಯ ದಿನ...

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...