Tuesday, March 24, 2026
Tuesday, March 24, 2026

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಹಿಂಪಡೆಯಲಾಗಿದೆ

Date:

ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ ಅಧ್ಯಕ್ಷ ಗೊಟಬಯ ರಾಜಪಕ್ಸ ಯಾವುದೇ ಕಾರಣಕ್ಕೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸರ್ಕಾರ ಪುರುಚ್ಚರಿಸಿದೆ.

ಸರ್ಕಾರದ ಮುಖ್ಯ ವಿಪ್​ ಹಾಗು ಹೆದ್ದಾರಿ ಖಾತೆ ಸಚಿವ ಜಾನ್ಸ್​ಟನ್ ಫೆರ್ನಾಂಡೋ ಈ ವಿಚಾರವಾಗಿ ಮಾತನಾಡಿದರು.

ದ್ವೀಪರಾಷ್ಟ್ರವು ಆರ್ಥಿಕ ದಿವಾಳಿಯಾಗಿದೆ. ಅಗತ್ಯ ವಸ್ತುಗಳಿಗೆ ನಾಗರಿಕರು ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ. ಪರಿಣಾಮ, ರಸ್ತೆಗಿಳಿದು ಸಾವಿರಾರು ಜನರು ಪ್ರತಿಭಟನೆ ನಡೆಸಿದ್ದು ಹಿಂಸಾಚಾರವೂ ನಡೆದಿತ್ತು.

ಹೀಗಾಗಿ ಏ.1ರಂದು ತುರ್ತು ಪರಿಸ್ಥಿತಿ ಜಾರಿಗೊಳಿಸಿ ಅಧ್ಯಕ್ಷ ಗೊಟಬಯ ರಾಜಪಕ್ಸ ಆದೇಶಿಸಿದ್ದರು. ಇದೀಗ ಇದನ್ನು ಹಿಂಪಡೆದು ಗೆಜೆಟ್​ ಅಧಿಸೂಚನೆ​ ಹೊರಡಿಸಲಾಗಿದೆ.

ಸಂಸತ್ತಿನಲ್ಲಿ ರಾಜಪಕ್ಸ ಸಾರಥ್ಯದ ಆಡಳಿತಾರೂಢ ಶ್ರೀಲಂಕಾ ಪೊದುಜನ ಪೆರಮುನಾ ಪಕ್ಷ (ಎಸ್‌ಎಲ್‌ಪಿಪಿ) ಬಹುಮತ ಕಳೆದುಕೊಂಡಿದೆ. ಆದರೂ, ಅಧ್ಯಕ್ಷರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸರ್ಕಾರದ ಮುಖ್ಯ ವಿಪ್​ ಆಗಿರುವ ಹೆದ್ದಾರಿ ಖಾತೆ ಸಚಿವ ಜಾನ್ಸ್​ಟನ್ ಫೆರ್ನಾಂಡೋ ಅವರು ತಿಳಿಸಿದ್ದಾರೆ.

ರಾಜಪಕ್ಸ ಅವರಿಗೆ 6.9 ಮಿಲಿಯನ್​ ಜನರು ಮತ ಹಾಕಿದ್ದಾರೆ. ಈ ವಿಚಾರವನ್ನು ನಾನು ಸರ್ಕಾರದ ಭಾಗವಾಗಿ ಸ್ಪಷ್ಟಪಡಿಸುತ್ತಿದ್ದೇನೆ. ಯಾವುದೇ ಪರಿಸ್ಥಿತಿಯಲ್ಲೂ ಅಧ್ಯಕ್ಷರು ರಾಜೀನಾಮೆ ನೀಡುವುದಿಲ್ಲ. ಏನೇ ಆದರೂ ನಾವು ಅದನ್ನು ಎದುರಿಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...