Thursday, October 3, 2024
Thursday, October 3, 2024

ಇದು ಅಮೃತಕಾಲ ಭಾರತಕ್ಕೆ ಹೊಸ ಅವಕಾಶಗಳು ತೆರೆದಿವೆ -ಮೋದೀಜಿ

Date:

ರಷ್ಯಾ, ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತ ತಳೆದಿರುವ ತಟಸ್ಥ ನಿಲುವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಯುದ್ಧದ ವಿಷಯದಲ್ಲಿ ಇಡೀ ವಿಶ್ವವೇ ಇಬ್ಭಾಗವಾಗಿದ್ದರೂ ಜಾಗತಿಕ ಒತ್ತಡಕ್ಕೆ ಮಣಿಯದೆ ತಟಸ್ಥ ಧೋರಣೆ ತಳೆಯುವ ಮೂಲಕ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿದೆ.

ಇದು ಭಾರತ ಹಿಂದೆಂದಿಗಿಂತಲೂ ಹೆಚ್ಚು ಸದೃಢವಾಗಿದೆ ಎಂಬುದನ್ನು ತೋರಿಸುತ್ತಿದೆ ಎಂದು ಮೋದೀಜಿ ಅವರು ಹೇಳಿದ್ದಾರೆ.

ಬಿಜೆಪಿ 42ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಸಂಸದರು, ಶಾಸಕರು, ಕಾರ್ಯಕರ್ತರನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ವರ್ಷದ ಸಂಸ್ಥಾಪನಾ ದಿನ ಅತ್ಯಂತ ಮಹತ್ವಪೂರ್ಣವಾಗಿದೆ.

ಮೊದಲನೆಯದಾಗಿ ನಾವು ಸ್ವಾತಂತ್ರ್ಯದ 75ನೇ ವರ್ಷ ಆಚರಿಸುತ್ತಿದ್ದೇವೆ. ಇದು ಭಾರತದ ಅಮೃತ ಕಾಲವಾಗಿದೆ. ಎರಡನೆಯದಾಗಿ ಜಾಗತಿಕ ಪರಿಸ್ಥಿತಿಯಲ್ಲಿ ವ್ಯಾಪಕ ಬದಲಾವಣೆ ಕಂಡುಬರುತ್ತಿದೆ.

ಇದು ಭಾರತಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಭಾರತದ ಸ್ಥಳೀಯ ವಸ್ತುಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ ಎಂದು ಮೋದೀಜಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...