ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಉತ್ಪಾದನೆ ಮತ್ತು ಉದ್ಯೋಗ ಸೃಷ್ಟಿಗೆ ಖಾಸಗಿ ವಲಯಕ್ಕೆ ಉತ್ತೇಜನ ನೀಡುವಂತೆ ಪ್ರಧಾನಮಂತ್ರಿ ಅವರು ಖಾಸಗಿ ವಲಯವನ್ನು ಕೋರಿದ್ದಾರೆ ಎಂದು ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು ತಿಳಿಸಿದ್ದಾರೆ.
ಏಪ್ರಿಲ್ 2 ರಂದು ನಡೆದ ಸಭೆಯಲ್ಲಿ ಖಾಸಗಿ ಮತ್ತು ಸರ್ಕಾರಿ ವಲಯಗಳಲ್ಲಿನ ಉದ್ಯೋಗದ ಬಗ್ಗೆ ಗಮನ ಹರಿಸುವಂತೆ ಪ್ರಧಾನಿ ಕೇಳಿಕೊಂಡರು. ಗೌಬಾ ಅವರು ಪ್ರಧಾನ ಮಂತ್ರಿಗಳ ಸಲಹೆಗಳನ್ನು ಜಾರಿಗೆ ತರಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ಏಪ್ರಿಲ್ 4ರ ಪತ್ರದಲ್ಲಿ ಸಣ್ಣಪುಟ್ಟ ಅಪರಾಧ ಮತ್ತು ಉಲ್ಲಂಘನೆ ಪ್ರಕರಣಗಳನ್ನು ನಿರ್ಲಕ್ಷಿಸಬೇಕು ಎಂದು ಉಲ್ಲೇಖಿಸಲಾಗಿದೆ. ಇಂತಹ ಎಲ್ಲ ನಿಬಂಧನೆಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದ್ದಾರಂತೆ. ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಪತ್ರದಲ್ಲಿ ಕೋರಲಾಗಿದೆ.