Friday, February 6, 2026
Friday, February 6, 2026

ಶ್ರೀರಾಮ ನವಮಿಯನ್ನ ಭಕ್ತಿಯಿಂದ ಆಚರಿಸೋಣ-ಎಚ್. ಡಿ.ಕೆ

Date:

ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ. ರಾಮನವಮಿ ಹಬ್ಬವನ್ನು ಭಕ್ತಿ,ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. ರಾಮನ ಹೆಸರಿನಲ್ಲಿ ಶೋಭಾಯಾತ್ರೆ ನಡೆಸಲು ನನ್ನದೇನೂ ಅಭ್ಯಂತರ ಇಲ್ಲ. ಅದಕ್ಕೆ ನನ್ನದೂ ಬೆಂಬಲ ಇದೆ. ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಕುಮರಸ್ವಾಮಿ ಅವರು ತಿಳಿಸಿದ್ದಾರೆ.

ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನು ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ನನ್ನ ಮನವಿ. ಶೋಭಾಯಾತ್ರೆಯನ್ನು ಹಿಂದುಗಳ ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ. ಅಲ್ಲೆಲ್ಲ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ. ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯ ಎಂದು ಟ್ವೀಟ್ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...