Sunday, May 17, 2026
Sunday, May 17, 2026

ವಿಪಕ್ಷಗಳ‌ ಗೂಗ್ಲಿಗೆ ಪ್ರಧಾನಿ ಇಮ್ರಾನ್ ಬೌಲ್ಡ್

Date:

ಹಲವು ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾದ ಪಾಕಿಸ್ತಾನದ ರಾಜಕೀಯ ಈಗ ಒಂದು ಹಂತ ತಲುಪಿದೆ. ಪ್ರಧಾನಿ ಇಮ್ರಾನ್ ಖಾನ್ ಅವರು ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಲು ವಿಫಲರಾಗಿದ್ದಾರೆ.ಮತ್ತು ಪ್ರಧಾನಿ ಪಟ್ಟವನ್ನು ತ್ಯಜಿಸಿದ್ದಾರೆ.

ಮಧ್ಯರಾತ್ರಿ ನಡೆದ ವಿಶ್ವಾಸಮತ ಮಂಡನೆಯಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ 174 ಸದಸ್ಯರು ಮತ ಹಾಕಿದರು.

ಪ್ರಧಾನಿ ಇಮ್ರಾನ್ ಖಾನ್ ಮತದಾನದ ಸಮಯದಲ್ಲಿ ಗೈರುಹಾಜರಾಗಲು ನಿರ್ಧರಿಸಿದರೆ, ಅವರ ಪಕ್ಷದ ಶಾಸಕರು ವಾಕ್‌ಔಟ್ ನಡೆಸಿದರು. 342 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ 174 ಶಾಸಕರು ಮತ ಚಲಾಯಿಸುವುದರೊಂದಿಗೆ ಅಂತಿಮವಾಗಿ ಅವಿಶ್ವಾಸ ಮತವನ್ನು ಅಂಗೀಕರಿಸಲಾಯಿತು.

ಸುಪ್ರೀಂ ಕೋರ್ಟ್ ಆದೇಶದಂತೆ ನಿನ್ನೆ ಇಮ್ರಾನ್ ಖಾನ್ ಅವಿಶ್ವಾಸ ಗೊತ್ತುವಳಿ ಎದುರಿಸಬೇಕಿತ್ತು. ಆದರೆ ಸ್ಪೀಕರ್ ನೆರವಿನಿಂದ ಇಡೀ ದಿನ , ರಾತ್ರಿಯ ತನಕವೂ ಇಮ್ರಾನ್ ಮತದಾನ ನಡೆಸಲಿಲ್ಲ.

ಕಲಾಪ ಆರಂಭವಾದಾಗಿನಿಂದಲೂ ವಿಪಕ್ಷಗಳ ನಾಯಕರು, ಸರ್ವೋಚ್ಚ ನ್ಯಾಯಾಲಯದ ಆದೇಶದ ಅನ್ವಯ ಕೂಡಲೇ ಅವಿಶ್ವಾಸ ಗೊತ್ತುವಳಿ ಪರ ಮತದಾನ ನಡೆಸಿ ಎಂದು ಸ್ಪೀಕರ್‌ ಖೈಸರ್‌ ಅವರನ್ನು ಒತ್ತಾಯಿಸತೊಡಗಿದರು. ವಿಪಕ್ಷ ನಾಯಕ ಶೆಹಬಾಜ್‌ ಷರೀಫ್ ಅವರು ಸಂಸತ್‌ನಲ್ಲಿ ಮಾತನಾಡುತ್ತಿದ್ದಂತೆ ಆಡಳಿತಾರೂಢ ಪಕ್ಷದ ಸಂಸದರು ಗದ್ದಲವೆಬ್ಬಿಸಿದರು ಎಂಬ ನೆಪ ಹೇಳಿ ಸ್ಪೀಕರ್‌ ಕಲಾಪವನ್ನು ಮುಂದೂಡಿದರು.

ಅನಂತರ ಸದನ ಸಮಾವೇಶಗೊಂಡಾಗ ರಮ್ಜಾನ್‌ ಇರುವ ಕಾರಣ ಇಫ್ತಾರ್‌ ಬಳಿಕ ಮತದಾನ ನಡೆಸುತ್ತೇನೆ ಎಂದು ಭರವಸೆ ನೀಡಿ, ಕಲಾಪವನ್ನು ಮುಂದೆ ಹಾಕಿದರು. ಇಷ್ಟೆಲ್ಲ ಆಗುತ್ತಿದ್ದರೂ ಇಮ್ರಾನ್‌ ಖಾನ್‌ ಮಾತ್ರ ಸದನದಲ್ಲಿ ಉಪಸ್ಥಿತರಿರಲಿಲ್ಲ. ಆದರೆ ಈ ಬೆಳವಣಿಗೆಗಳ ನಡುವೆಯೇ ಅವರು ರಾತ್ರಿ 9ಕ್ಕೆ ಸಂಪುಟ ಸಭೆ ಕರೆದರು.

ಇಫ್ತಾರ್‌ ಮುಗಿಯುತ್ತಿದ್ದಂತೆ ಮತದಾನ ಆರಂಭವಾಗುತ್ತದೆ ಎಂದು ನಂಬಿದ್ದ ವಿಪಕ್ಷಗಳಿಗೆ ಮತ್ತೆ ನಿರಾಶೆಯಾಯಿತು. ಸ್ಪೀಕರ್‌ ಮತ್ತೆ ಕಲಾಪವನ್ನು ಮುಂದೂಡಿದರು. ಹೀಗಾಗಿ ರಾತ್ರಿಯಿಡೀ ಪಾಕ್‌ ಸಂಸತ್ತಿನಲ್ಲಿ ಹೈಡ್ರಾಮಾ ಸೃಷ್ಟಿಯಾಗುವ ಲಕ್ಷಣ ಗೋಚರಿಸಿತು.

ನಂತರ ಪ್ರಧಾನಿ ಇಮ್ರಾನ್ ಖಾನ್ ಮತದಾನದ ಸಮಯದಲ್ಲಿ ಗೈರುಹಾಜರಾಗಲು ನಿರ್ಧರಿಸಿದರೆ, ಅವರ ಪಕ್ಷದ ಶಾಸಕರು ವಾಕ್‌ಔಟ್ ನಡೆಸಿದರು. 342 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ 174 ಶಾಸಕರು ಮತ ಚಲಾಯಿಸುವುದರೊಂದಿಗೆ ಅಂತಿಮವಾಗಿ ಅವಿಶ್ವಾಸ ಮತವನ್ನು ಅಂಗೀಕರಿಸಲಾಯಿತು.

ಸುಪ್ರೀಂ ಕೋರ್ಟ್ ಆದೇಶದಂತೆ ಶನಿವಾರ ಇಮ್ರಾನ್ ಖಾನ್ ಅವಿಶ್ವಾಸ ಗೊತ್ತುವಳಿ ಎದುರಿಸಬೇಕತ್ತು. ಆದರೆ ಸ್ಪೀಕರ್ ನೆರವಿನಿಂದ ಇಡೀ ದಿನ ಕಣ್ಣಾಮುಚ್ಚಾಲೆಯಾಡಿದ ಇಮ್ರಾನ್ ರಾತ್ರಿಯ ತನಕವೂ ಮತದಾನ ನಡೆಸಲಿಲ್ಲ.

ಕಲಾಪ ಆರಂಭವಾದಾಗಿನಿಂದಲೂ ವಿಪಕ್ಷಗಳ ನಾಯಕರು, ಸರ್ವೋಚ್ಚ ನ್ಯಾಯಾಲಯದ ಆದೇಶದ ಅನ್ವಯ ಕೂಡಲೇ ಅವಿಶ್ವಾಸ ಗೊತ್ತುವಳಿ ಪರ ಮತದಾನ ನಡೆಸಿ ಎಂದು ಸ್ಪೀಕರ್‌ ಖೈಸರ್‌ ಅವರನ್ನು ಒತ್ತಾಯಿಸತೊಡಗಿದರು. ವಿಪಕ್ಷ ನಾಯಕ ಶೆಹಬಾಜ್‌ ಷರೀಫ್ ಅವರು ಸಂಸತ್‌ನಲ್ಲಿ ಮಾತನಾಡುತ್ತಿದ್ದಂತೆ ಆಡಳಿತಾರೂಢ ಪಕ್ಷದ ಸಂಸದರು ಗದ್ದಲವೆಬ್ಬಿಸಿದರು ಎಂಬ ನೆಪ ಹೇಳಿ ಸ್ಪೀಕರ್‌ ಕಲಾಪವನ್ನು ಮುಂದೂಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...