Thursday, December 18, 2025
Thursday, December 18, 2025

ಗೆಲ್ಲದ ರಷ್ಯಕ್ಕೆ ಹೊಸ ಮಿಲಿಟರಿ ಸಾರಥಿಯಾಗಿ ಡ್ವೋರ್ನಿಕೋವ್ ನೇಮಕ

Date:

ಉಕ್ರೇನ್ ನಡುವಿನ ಯುದ್ಧದಲ್ಲಿ ರಷ್ಯಾ ಮಿಲಿಟರಿ ಕೀವ್ ನಗರವನ್ನು ಪೂರ್ಣವಾಗಿ ವಶಪಡಿಸಿಕೊಳ್ಳಲು ವಿಫಲವಾದ ಕಾರಣ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೈನ್ಯಕ್ಕೆ ಹೊಸ ಜನರಲ್ ನೇಮಕ ಮಾಡಿದ್ದಾರೆ. ಅಲೆಕ್ಸಾಂಡರ್ ಡ್ವೊರ್ನಿಕೋವ್ ಅವರನ್ನು ನೇಮಿಸಿದ್ದಾರೆ.

ರಷ್ಯಾದ ದಕ್ಷಿಣ ಮಿಲಿಟರಿ ಜಿಲ್ಲೆಯ ಕಮಾಂಡರ್ ಉಕ್ರೇನ್‌ನಲ್ಲಿ ಯುದ್ಧವನ್ನು ಮುನ್ನಡೆಸಲಿದ್ದಾರೆ.

ಡ್ವೊರ್ನಿಕೋವ್ ಅವರನ್ನು ಉಕ್ರೇನ್‌ನಲ್ಲಿ ರಷ್ಯಾದ ಮಿಲಿಟರಿ ಕಾರ್ಯಾಚರಣೆಯ ಥಿಯೇಟರ್ ಕಮಾಂಡರ್ ಎಂದು ಹೆಸರಿಸಲಾಗಿದೆ.

ಮೇ 9 ರಂದು ನಡೆಯಲಿರುವ ವಿಜಯ ದಿನ ಆಚರಣೆಯ ಮೊದಲು ಯುದ್ಧಭೂಮಿಯಲ್ಲಿ ಭಾರಿ ಪ್ರಗತಿಯೊಂದಿಗೆ ಪುಟಿನ್ ಅವರ ಮುಂದೆ ಕಾಣಿಸಿಕೊಳ್ಳುವ ಗುರಿಯನ್ನು ರಷ್ಯಾದ ಜನರಲ್ ಹೊಂದಿದ್ದಾರೆ ಎಂಬ ಊಹಾಪೋಹವಿದೆ.

ಮಿಲಿಟರಿ ವಿಶ್ಲೇಷಕರು ಮತ್ತು ಗುಪ್ತಚರ ಮೌಲ್ಯಮಾಪನಗಳೊಂದಿಗೆ ಪರಿಚಿತವಾಗಿರುವ ಯುಎಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್‌ಎನ್ ಈ ಮಾಹಿತಿಯನ್ನು ತಿಳಿಸಿದೆ.

ಮೇ 9 ವಿಜಯ ದಿನ ರಷ್ಯಾದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಏಕೆಂದರೆ ಇದು ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ಮೇಲೆ ಸೋವಿಯತ್ ಒಕ್ಕೂಟದ ವಿಜಯದ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ.

ಉತ್ತರ ಉಕ್ರೇನ್‌ನಿಂದ ರಷ್ಯಾ ನಿರ್ಗಮನಕ್ಕೆ ಮುಂದಾಗಿದೆ ಎಂಬುದಕ್ಕೆ ಪುರಾವೆಗಳನ್ನು ತೋರಿಸುತ್ತದೆ ಎಂದು ನಿನ್ನೆ ಇಂಗ್ಲೆಂಡ್ ಮಿಲಿಟರಿ ಗುಪ್ತಚರ ಮಾಹಿತಿ ತಿಳಿಸಿದೆ.

ರಷ್ಯಾದ 13 ವೈಮಾನಿಕ ಗುರಿಗಳನ್ನು ನಿನ್ನೆ ನಾಶಪಡಿಸಲಾಗಿದೆ ಎಂದು ಉಕ್ರೇನ್‌ನ ವಾಯುಪಡೆಯು ಮಾಹಿತಿ ನೀಡಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ನಿನ್ನೆ ಕೈವ್‌ನಲ್ಲಿ ಭೇಟಿಯಾಗಿ, ಉಕ್ರೇನಿಯನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಉಕ್ರೇನ್‌ಗೆ ಪ್ರಯಾಣಿಸಿದ್ದೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...