Wednesday, July 8, 2026
Wednesday, July 8, 2026

ಬೆಲೆಗಳು ಅತಿಹೆಚ್ಚು ಏರಿಕೆಯಾದದ್ದು ಕಾಂಗ್ರೆಸ್ ಅವಧಿಯಲ್ಲೇ- ಬೊಮ್ಮಾಯಿ

Date:

ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಲೆ ಏರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುತ್ತದೆ. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...