Tuesday, August 25, 2026
Tuesday, August 25, 2026

ಹಿಂದೂ- ಮುಸ್ಲೀಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು-ಯಡಿಯೂರಪ್ಪ

Date:

ವಿನಾಕಾರಣ ಬೆಲೆ ಏರಿಕೆ ವಿಷಯ ದೊಡ್ಡದು ಮಾಡುವುದು ಬೇಡ. ಕಾಂಗ್ರೆಸ್​ನವರಿಗೆ ಬೇರೇನೂ ಚಟುವಟಿಕೆ ಇಲ್ಲ. ರಾಜ್ಯದ ಅಭಿವೃದ್ಧಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಹಕಾರ ನೀಡಲಿ. ನಾವೆಲ್ಲರೂ ಒಟ್ಟಾಗಿ ಸೇರಿ ರಾಜ್ಯ ಅಭಿವೃದ್ಧಿ ಮಾಡಬೇಕು. ಸಣ್ಣ ಪುಟ್ಟ ವಿಷಯಗಳಿಗೆ ಗೊಂದಲ ಉಂಟು ಮಾಡಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ತಿಳಿಸಿದ್ದಾರೆ.

ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು. ಇನ್ಮುಂದೆ ಅಹಿತಕರ ಘಟನೆಗೆ ಅವಕಾಶ ಕೊಡದಿರಲಿ. ಕೆಲ‌ ಕಿಡಿಗೇಡಿಗಳು ಸೌಹಾರ್ದತೆ ಕೆಡಿಸುವ ಕೆಲಸ ಮಾಡ್ತಿದ್ದಾರೆ. ನಾನೂ ಕೂಡ ಅಂಥವರಿಗೆ ಕಿವಿಮಾತು ಹೇಳುತ್ತೇನೆ. ಅಹಿತಕರ ಘಟನೆ ನಡೆಯದಂತೆ ಈಗಾಗಲೇ‌ ಸಿಎಂ ಬೊಮ್ಮಾಯಿ ಎಚ್ಚರಿಕೆಯನ್ನು ಕೂಡ ಕೊಟ್ಟಿದ್ದಾರೆ. ಸರ್ಕಾರ ಇದನ್ನೆಲ್ಲ ಸಹಿಸೋದಿಲ್ಲ. ನಿಮ್ಮ ನಿಮ್ಮ ಕೆಲಸ ಮಾಡಿಕೊಂಡು ಹೋಗಿ. ಯಾರೂ ಸಾಮರಸ್ಯ ಕದಡಬೇಡಿ. ಮುಸ್ಲಿಮರು‌ ನೆಮ್ಮದಿ, ಗೌರವದಿಂದ ಬಾಳಬೇಕಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರು ಹೇಳಿದ್ದಾರೆ.

ನಾಳೆಯಿಂದ 3 ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡ್ತಿದ್ದೇವೆ. ಪಕ್ಷ ಬಲಪಡಿಸಲು ಈ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸುತ್ತೇವೆ. ಮುಂದಿನ ಚುನಾವಣೆ ಸಿದ್ಧತೆಗಾಗಿ ಈ ರಾಜ್ಯ ಪ್ರವಾಸ. ಇನ್ಮುಂದೆ ನಿರಂತರವಾಗಿ ರಾಜ್ಯ ಪ್ರವಾಸಗಳು ನಡೆಯುತ್ತವೆ ಎಂದರು.

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್​ನಿಂದ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಕಾಂಗ್ರೆಸ್​​ನವರ ಅಧಿಕಾರದ ಅವಧಿಯಲ್ಲಿ ಬೆಲೆ ಏರಿಕೆ ಹೇಗಿತ್ತು? ಕಾಂಗ್ರೆಸ್​ಗೆ ಹೋಲಿಸಿದ್ರೆ ಈಗಿನ ದರ ಏನೇನೂ ಇಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...