ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ.
ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ, ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯನ್ನು ಈ ಬಜೆಟ್ ನಲ್ಲಿ ಜಾರಿಗೆ ತರಲಾಗಿದೆ ಎಂದರು.
ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ವಿಷಯಗಳು, ಪ್ರಶ್ನಾ ಪತ್ರಿಕೆಗಳು ಆನ್ ಲೈನ್ ನಲ್ಲಿ ಲಭ್ಯ ಇರುತ್ತವೆ ಎಂದು ತಿಳಿಸಿದ್ದಾರೆ.