Tuesday, August 25, 2026
Tuesday, August 25, 2026

ಉಕ್ರೇನ್ ದೇಶದ ಬುಚಾದಲ್ಲಿನ ನಾಗರಿಕರ ಹತ್ಯೆಯನ್ನ ಭಾರತ ಖಂಡಿಸುತ್ತದೆ- ಮೋದಿ

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ನಿನ್ನೆ ರಾತ್ರಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಷ್ಯಾ,ಉಕ್ರೇನ್‌ ನಡುವಣ ಬಿಕ್ಕಟ್ಟು ಪರಿಹಾರದ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ವ್ಯವಹಾರಗಳ ಬಗ್ಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ದಾಳಿಯಿಂದ ಉಕ್ರೇನಿನಲ್ಲಿ ಪರಿಸ್ಥಿತಿ ಚಿಂತಾಜನಕವಾಗಿರುವ ಸಂದರ್ಭದಲ್ಲಿ ನಾವು ಮಾತನಾಡುತ್ತಿದ್ದೇವೆ. ಉಕ್ರೇನಿನ ಬುಚಾದಲ್ಲಿ ನಡೆದ ಮುಗ್ಧ ನಾಗರಿಕರ ಹತ್ಯೆ ತೀವ್ರ ನೋವುಂಟು ಮಾಡಿದೆ. ಈ ಘಟನೆಯನ್ನು ಭಾರತ ಖಂಡಿಸಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಷ್ಯಾ ಮತ್ತು ಉಕ್ರೇನ್‌ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದೇನೆ. ಉಕ್ರೇನಿನ ಅಧ್ಯಕ್ಷರೊಂದಿಗೆ ನೇರವಾಗಿ ಮಾತನಾಡಿ ಬಿಕ್ಕಟ್ಟು ಪರಿಹರಿಸಿಕೊಳ್ಳುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಸಲಹೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ನಂತರ ರಷ್ಯಾ,ಉಕ್ರೇನ್‌ ನಡುವಣ ನಡೆಯುತ್ತಿರುವ ಶಾಂತಿ ಮಾತುಕತೆ ಯಶಸ್ವಿಯಾಗುತ್ತದೆ ಎಂದು ಭಾವಿಸುತ್ತೇನೆ ಎಂದು ತಮ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಂತರ ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧದ ಕುರಿತು ಮಾತನಾಡಿದರು. ವಿಶ್ವದ ಅತಿ ದೊಡ್ಡ ಹಾಗೂ ಅತ್ಯಂತ ಹಳೆಯ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಭಾರತ, ಅಮೆರಿಕ ಸ್ವಾಭಾವಿಕ ಪಾಲುದಾರರು ಎಂದು ವರ್ಣಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಿನಲ್ಲಿ ನಾನು ವಾಷಿಂಗ್ಟನ್‌ಗೆ ಬಂದಾಗ, ಭಾರತ-ಅಮೆರಿಕ ಪಾಲುದಾರಿಕೆಯು ಅನೇಕ ಜಾಗತಿಕ ಸಮಸ್ಯೆಗಳ ಪರಿಹಾರಕ್ಕೆ ಕೊಡುಗೆ ನೀಡಬಹುದು ಎಂದು ನೀವು ಹೇಳಿದ್ದೀರಿ. ಈ ಮಾತನ್ನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ಹೇಳಿದ್ದಾರೆ.

ನಂತರದಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಉಕ್ರೇನಿನ ಜನರಿಗೆ ಮಾನವೀಯ ನೆರವು ನೀಡಿದ ಭಾರತ ಕ್ರಮವನ್ನು ಅಮೆರಿಕ ಸ್ವಾಗತಿಸುತ್ತದೆ. ರಷ್ಯಾದ ಯುದ್ಧದ ಪರಿಣಾಮಗಳ ನಿರ್ವಹಣೆ ಹೇಗೆ ಎಂಬ ಬಗ್ಗೆ ಅಮೆರಿಕ ಮತ್ತು ಭಾರತ ಸಮಾಲೋಚನೆಯನ್ನು ಮುಂದುವರಿಸಲಿವೆ ಎಂದು ಹೇಳಿದ್ದಾರೆ. ಇದೇ ವೇಳೆ ಬಲವಾದ ಮತ್ತು ಬೆಳೆಯುತ್ತಿರುವ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಪರಸ್ಪರ ಹಂಚಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...