Tuesday, March 24, 2026
Tuesday, March 24, 2026

ಜನತಾ ಜಲಧಾರೆ ಮೇಕೆದಾಟು ಪಾದಯಾತ್ರೆಯ ರೀತಿ ಶೋ ಯಾತ್ರೆಯಲ್ಲ -ಎಚ್. ಡಿ.ಕೆ.

Date:

ಈ ಬಾರಿ ಕನ್ನಡಿಗರ ಬಹುಮತದ ಸರ್ಕಾರ ಬೇಕು. ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಮಾಡುವುದಿಲ್ಲ. 30 ಅಥವಾ 40 ಸ್ಥಾನಕ್ಕಾಗಿ ಹೋರಾಟ ಅಲ್ಲ. ಪೂರ್ಣ ಪ್ರಮಾಣದ ಸರ್ಕಾರಕ್ಕೆ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜನತಾ ಜಲಧಾರೆ ಯಾತ್ರೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ವಿಚಾರಾಧಾರಿತವಾದ ಹೋರಾಟ. ಧರ್ಮ -ಧರ್ಮಗಳ ನಡುವೆ ಬೆಂಕಿ ಇಟ್ಟು ಮತ ಕೇಳುತ್ತಿಲ್ಲ. ರಾಜ್ಯದ ಅಭಿವೃದ್ದಿಗಾಗಿ ನಮ್ಮ ಹೋರಾಟ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಮೌನ ವಿಚಾರವಾಗಿ ಪ್ರತಿಕ್ರಿಯಿಸಿ, ನಿಮ್ಮ ಯಾವ ಕೆಲಸ ಮಾತನಾಡುತ್ತಿದೆ.? ರಾಯಚೂರಿನಲ್ಲಿ ತಲವಾರ್ ಹಂಚಿದ್ದಾರೆ. ಯಾವ ಕಾರಣಕ್ಕೆ ತಲವಾರ್ ಹಂಚಿದ್ದಾರೆ? ಅವರ‌ನ್ನು ನೀವು ಅರೆಸ್ಟ್ ಮಾಡಿದ್ದೀರಾ? ಮೌನಿ‌ ಬಸವರಾಜ ಬೊಮ್ಮಾಯಿ ಅವರೇ ಎಂದು ಕಿಡಿಕಾರಿದರು.

ಈ ಬಾರಿ ಜೆಡಿಎಸ್‌ಗೆ ಬಹುಮತ ಕೊಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜನೆ ಮಾಡಲಾಗುವುದು ಎಂದರು.

ರಾಯಚೂರಿನಲ್ಲಿ ಲವ್ ಕೇಸರಿ ವಿಚಾರವಾಗಿ ಮಾತನಾಡಿ, ಯಾವುದೇ ಪ್ರೀತಿಯಲ್ಲಿ ಬಾಂಧವ್ಯ ಮುಖ್ಯ. ಪರಸ್ಪರ ಪ್ರೀತಿಸುವವರಿಗೆ ತೊಂದರೆ ಕೊಡಬಾರದು. ಅವರು ಯಾವ ಧರ್ಮದವರೇ ಆಗಿರಲಿ. ಅವರನ್ನು ನಿಯಂತ್ರಿಸುವ ಕೆಲಸ ಮಾಡಬಾರದು ಎಂದರು.

ಜನತಾ ಜಲಧಾರೆ ಯಾತ್ರೆ ವಿಚಾರವಾಗಿ ಮಾತನಾಡಿ, ಇದು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಪರ್ಯಾಯವಲ್ಲ. ಅದು ಶೋಗಾಗಿ ನಡೆಸಿದ ಯಾತ್ರೆ. ಅವರು ನೇರವಾಗಿ ರಾಜಕೀಯ ಯಾತ್ರೆ ಎಂದು ಹೇಳಲಿಲ್ಲ. ನಮ್ಮದು ಜನರ ಮುಂದೆ ಸಮಸ್ಯೆ ಬಿಚ್ಚಿಡಲು ಯಾತ್ರೆ. ಈ ಮೂಲಕ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ಇದನ್ನು ನಾನು ನೇರವಾಗಿ ಹೇಳುತ್ತಿದ್ದಾನೆ ಎಂದರು.

ನಮ್ಮ ಹಾಸನ ಜಿಲ್ಲೆಯಲ್ಲಿ ಯಾವ ಜಾತ್ರೆಯಲ್ಲೂ ಮುಸ್ಲಿಂಮರಿಗೆ ನಿರ್ಬಂಧ ಹೇರುವುದಕ್ಕೆ ಅವಕಾಶ ಕೊಡುವುದಿಲ್ಲ. ಚೆನ್ನಕೇಶವ ಜಾತ್ರೆಯಲ್ಲಿ ಸಮಸ್ಯೆ ಆಗಿರುವುದು ಗಮನಕ್ಕೆ ಬಂದಿದೆ. ಖುದ್ದು ರೇವಣ್ಣ ಅವರಿಗೆ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೇನೆ. ನಿರ್ಬಂಧ ತೆರವು ಮಾಡಿಸಿ ಅವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಿಸುತ್ತೇನೆ. ಹಾಸನ ಜಿಲ್ಲೆ ಮಾತ್ರ ಅಲ್ಲ, ಎಲ್ಲಾ ಜಿಲ್ಲೆಗಳಲ್ಲೂ ನಿರ್ಬಂಧ ತೆರವಿಗೆ ನನ್ನ ಹೋರಾಟ ಇರುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...