ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಈಗ ಸಚಿವ ಈಶ್ವರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದರಿಂದ ಶೀಘ್ರದಲ್ಲಿಯೇ ಸಚಿವ ಕೆ.ಎಸ್.
ಈಶ್ವರಪ್ಪನವರ ಸ್ಥಾನಕ್ಕೆ ಚ್ಯುತಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡವು ಪಕ್ಷವಾಗಲೀ ಅಥವಾ ಹೈಕಮಾಂಡ್ ನಿಂದಾಗಲಿ ಬರಬಹುದೆಂದು ರಾಜಕೀಯ ವಲಯದಲ್ಲಿ ಗುಸುಗುಸು ಶುರುವಾಗಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲಿಯೇ ಪ್ರತಿಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಈಶ್ವರಪ್ಪ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು. ಅವರನ್ನು ಸಂಪುಟದಿಂದ ಕಿತ್ತೆಸೆಯಬೇಕು ಹಾಗೂ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ..
ಇನ್ನು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, “ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಯಾಕೆ?,” ಎಂದು ಮರುಪ್ರಶ್ನಿಸಿದ್ದಾರೆ.
“ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನನಗೆ ಗೊತ್ತಿಲ್ಲ. ಅವರು ನನ್ನ ಮೇಲೆ ಕಮಿಷನ್ ಆರೋಪ ಮಾಡಿದ್ದರು. ಯಾಕೆ ಆರೋಪ ಮಾಡಿದ್ದೆ ಎಂದು ಕೇಳುವುದಕ್ಕೆ ಇಂದು ಅವರೇ ಇಲ್ಲ. ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಕೋರ್ಟ್ ಕೂಡಾ ವಿಚಾರಣೆ ಅಂಗೀಕರಿಸಿತ್ತು,” ಎಂದು ಪ್ರತಿಕ್ರಿಯಿಸಿದರು.
ಈಗಾಗಲೇ ಬರುವ ವರ್ಷದ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ
ಬಹಳ ಸೂಕ್ಷ್ಮವಾದ ಸನ್ನಿವೇಶದಲ್ಲಿ ಈ ಆತ್ಮಹತ್ಯೆ ಪ್ರಕರಣ ನಡೆದಿದೆ.
ತನಿಖೆಯಾಗಿ ಫಲಿತಾಂಶ ಬಾರದ ಹೊರತು ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂಬುದಾಗಿ ಪರಿಣತರ ಅಭಿಪ್ರಾಯವಾಗಿದೆ.