Thursday, February 26, 2026
Thursday, February 26, 2026

ಪ್ರೌಢಶಾಲಾ ಹಂತದಿಂದ ಉದ್ಯಮಶೀಲತೆ ಮತ್ತು ವೃತ್ತಿ ಮಾರ್ಗದರ್ಶನ ಪಠ್ಯಕ್ರಮ

Date:

ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದ ಪಿಯುಸಿವರೆಗೆ ಉದ್ಯಮಶೀಲತೆಯ ಬೆಳವಣಿಗೆಯನ್ನು ತಿಳಿಸುವ ಪಠ್ಯಕ್ರಮವನ್ನು ಹಾಗೂ 8ನೇ ತರಗತಿಯಿಂದ ಪದವಿಯವರೆಗೂ ವೃತ್ತಿ ಮಾರ್ಗದರ್ಶನವನ್ನು ಕಡ್ಡಾಯಗೊಳಿಸಬೇಕು ಎಂದು ಕೌಶಲ್ಯ, ಉದ್ಯಮಶೀಲತೆ ಮತ್ತು ನವೋದ್ಯಮ ಕಾರ್ಯಪಡೆಯು ಶಿಫಾರಸು ಮಾಡಿದೆ.

ವಿಧಾನಸೌಧದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಕಾರ್ಯಪಡೆ ಅಧ್ಯಕ್ಷರೂ ಆದ ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಅವರು ಕೊಟ್ಟ ವರದಿಯನ್ನು ಸ್ವೀಕರಿಸಿದ ನಂತರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾತನಾಡಿದರು.

ಮುಂದಿನ 10 ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದು ಸರಕಾರದ ಗುರಿಯಾಗಿದೆ. ಕೃಷಿ ಸೇರಿದಂತೆ ‌ಎಲ್ಲ ವಲಯಗಳಲ್ಲಿ ಗರಿಷ್ಠ ಉದ್ಯೋಗಾವಕಾಶದ ಸಾಧ್ಯತೆ ಇದೆ. ಇದನ್ನು ನನಸಾಗಿಸಲು ಪ್ರಮುಖ ಇಲಾಖೆಗಳನ್ನೆಲ್ಲ ಸೇರಿಸಿಕೊಂಡು ಕಾರ್ಯ ಪ್ರವೃತ್ತವಾಗಲಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ, ನಿರುದ್ಯೋಗ ನಿವಾರಣೆ ಮತ್ತು ಗುಣಮಟ್ಟದ ಶಿಕ್ಷಣ ಇವು ಸಾಧ್ಯವಾಗಬೇಕೆಂದರೆ ಕಲಿಕೆಯ ಹಂತದಿಂದಲೇ ಕೌಶಲ್ಯವನ್ನು ಕಲಿಸುವುದರ ಜೊತೆಗೆ ಉದ್ಯಮಶೀಲ ಮನೋಭಾವವನ್ನು ಬೆಳೆಸಬೇಕಾಗಿದೆ. ಆದ್ದರಿಂದ, ಕಾರ್ಯಪಡೆಯ ಶಿಫಾರಸಿನಂತೆ ಜಿಲ್ಲಾ ಮಟ್ಟದಲ್ಲಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಉದ್ಯಮಶೀಲತಾ ವಿಕಸನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಆಧುನಿಕ ಕಾಲಕ್ಕೆ ತಕ್ಕಂತೆ ಎಲ್ಲಾ ಜಿಲ್ಲೆಗಳಲ್ಲೂ ವಿಕಸನ ಅಥವಾ ಪರಿಪೋಷಣಾ ಕೇಂದ್ರಗಳ ಜಾಲವನ್ನು ಅಸ್ತಿತ್ವಕ್ಕೆ ತರಬೇಕು. ಇದನ್ನು ಬಲಪಡಿಸಲು ಇಸ್ರೇಲಿನ ತಂತ್ರಜ್ಞಾನ ವರ್ಗಾವಣೆ ಕೇಂದ್ರಗಳ ಮಾದರಿಯಲ್ಲಿ ಕರ್ನಾಟಕ ಸಂಶೋಧನೆ ಮತ್ತು ನಾವೀನ್ಯತೆ ಪ್ರಾಧಿಕಾರವನ್ನು ಸ್ಥಾಪಿಸಿ, ಅದನ್ನು ನೋಡಲ್ ಏಜೆನ್ಸಿಯಾಗಿ ಮಾಡಲಿದ್ದೇವೆ ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಕೌಶಲ್ಯಗಳು ಯಾವ ಮಟ್ಟದಲ್ಲಿವೆ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಮಾದರಿ ಸಮೀಕ್ಷೆ ಕೈಗೊಳ್ಳಬೇಕು. ಜೊತೆಗೆ, ಜಿಲ್ಲಾ ಮಟ್ಟದಲ್ಲಿ ಉದ್ಯಮ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಇದರಲ್ಲಿ ಹೇಳಲಾಗಿದೆ. ಹೊಸ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಏಂಜಲ್ ಹೂಡಿಕೆದಾರರು, ಬ್ಯಾಂಕು ಮತ್ತು ಮತ್ತಿತ್ತರು ಸೂಕ್ತ ಹಣಕಾಸು ಸಂಸ್ಥೆಗಳಿಂದ ಸಾಫ್ಟ್ ಲೋನ್ ಒದಗಿಸಲು ವ್ಯವಸ್ಥೆ ಮಾಡುವ ಅಗತ್ಯವಿದೆ. ಇವೆಲ್ಲವುಗಳನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಶೀಘ್ರದಲ್ಲೇ ಮುಂದಿನ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಡಿಜಿಟಲ್ ಆರ್ಥಿಕತೆಯಲ್ಲಿ ಕೌಶಲ್ಯಪೂರ್ಣ ಯುವಜನರಿಗೆ ಅಪಾರ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಪದವಿ ಶಿಕ್ಷಣ ಮುಗಿಸಿರುವ ವಿದ್ಯಾರ್ಥಿಗಳಿಗೆ ಸೂಕ್ತ ಕೌಶಲ್ಯ ಕೋರ್ಸುಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಮಿಗಿಲಾಗಿ, ಯುವಜನರನ್ನು ಭವಿಷ್ಯದ ಕೌಶಲ್ಯಗಳಲ್ಲಿ ಸನ್ನದ್ಧಗೊಳಿಸಲು ಇನ್ಫೋಸಿಸ್, ಮೈಕ್ರೋಸಾಫ್ಟ್, ಐಬಿಎಂ ಮುಂತಾದ ಕಂಪನಿಗಳಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಈ ಕಂಪನಿಗಳೊಂದಿಗೆ ಸಹಯೋಗ ಹೊಂದಲಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Basavanna ಬಸವಣ್ಣನವರ ಮತ್ತು ಕನಕದಾಸರ ರಚನೆಗಳಲ್ಲಿ ಸಂವಿಧಾನದ ಆಶಯಗಳು..

ಲೇ: ಡಾ.ರವಿ.ಎಂ.ಸಿದ್ಲಿಪುರ. Basavanna ಈ ಶೀರ್ಷಿಕೆಯಲ್ಲಿ 12, 16, 19-20, ಶತಮಾನಗಳಲ್ಲಿನ ಬಸವ,...

B. Y. Raghavendra ಊರಗಡೂರಿನ ಮೃತ ವಿದ್ಯಾರ್ಥಿ ಸಂಕೇತ್ ಮನೆಗೆ ಸಂಸದ ರಾಘವೇಂದ್ರ ಭೇಟಿ. ಕುಟುಂಬಸ್ಥರಿಗೆ ಸಾಂತ್ವನ.

B. Y. Raghavendra ಶಿವಮೊಗ್ಗದ ಊರುಗಡೂರಿನ ಸೂಳೆಬೈಲಿನಲ್ಲಿ ಗಾಂಜಾ ನಶೆಯಲ್ಲಿದ್ದ ಮತಾಂಧ...

Prof. K. Ramakrishnaiah ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ನೂತನ ಕುಲಪತಿಗಳಾಗಿ ಪ್ರೊ.ಕೆ.ರಾಮಕೃಷ್ಣಯ್ಯ ನೇಮಕ.

Prof. K. Ramakrishnaiah ನಾಡಿನ ಖ್ಯಾತ ರಂಗಕರ್ಮಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ...

BMTC ಬೆಎಂಟಿಸಿ ಸಂಸ್ಥೆಯ ಮೃತ ನೌಕರರ ಅವಲಂಬಿತರಿಗೆ ಅನುಕಂಪಾಧಾರಿತ ನೇಮಕಾತಿ ಆದೇಶ,ಪರಿಹಾರ ವಿತರಣೆ.

BMTC ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ದಿನಾಂಕ 21 ಫೆಬ್ರವರಿ...