Sunday, August 2, 2026
Sunday, August 2, 2026

ರಾಜ್ಯದಲ್ಲಿ ಈಗಿನಿಂದಲೇ ಕೋವಿಡ್ ವಿರುದ್ಧ ಮುಂಜಾಗ್ರತೆ- ಸುಧಾಕರ್

Date:

ಚೀನಾ, ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್ ಇನ್ನು 8 ದೇಶಗಳಲ್ಲಿ ಕೊರೋನಾ ಹರಡುವಿಕೆ ತೀವ್ರವಾಗಿದೆ. ಈ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಆರೋಗ್ಯ ಸೌಧದಲ್ಲಿ ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

ದೇಶಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಕಂಡುಬಂದಿದೆ. ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್, ಚೀನಾ ದೇಶಗಳಲ್ಲಿ ಸಾಂಕ್ರಾಮಿಕದ ತೀವ್ರತೆ ಹೆಚ್ಚಿದೆ. ಜರ್ಮನಿ, ಯುಕೆಯಲ್ಲೂ ಸೋಂಕು ಹೆಚ್ಚಾಗಿದೆ. ಇಲ್ಲಿ ಎಕ್ಸ್‌ಇ ಮತ್ತು ಎಂಇ ಎಂಬ ಹೊಸ ವೈರಾಣು ಪ್ರಭೇದಗಳು ಕಂಡುಬಂದಿವೆ. ದೇಶದಲ್ಲಿ ನವದೆಹಲಿ ಹಾಗೂ ಹರಿಯಾಣ ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದೆ. ಇದಕ್ಕಾಗಿ ತುರ್ತು ಸಮಾಲೋಚನೆ ಸಭೆ ನಡೆಸಲಾಗಿದೆ. ಈ 8 ದೇಶಗಳಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಾಜ್ಯಕ್ಕೆ ಬರುವವರ ಮೇಲೆ ವಿಶೇಷ ನಿಗಾವಹಿಸಬೇಕಿದೆ. ಆ ಪ್ರಯಾಣಿಕರಿಗೆ ಥರ್ಮಲ್ ತಪಾಸಣೆ ಮಾಡುತ್ತದೆ. ಅವರು ಮನೆಗೆ ತೆರಳಿದ ನಂತರ ಒಂದು ವಾರ ಅಥವಾ ಹತ್ತು ದಿನ ಟೆಲಿ ಮಾನಿಟರಿಂಗ್ ಮಾಡುತ್ತದೆ. ಲಸಿಕೆ ಪಡೆಯದ ಮಕ್ಕಳ ಮೇಲೆ ವಿಶೇಷ ನಿಗಾ ಇರಿಸುವುದು, ಸುಮಾರು 5 ಸಾವಿರ ಮಕ್ಕಳಿಗೆ ಪರೀಕ್ಷೆ ಮಾಡುವುದು ಮೊದಲಾದ ಸಲಹೆಗಳನ್ನು ತಜ್ಞರು ನೀಡಿದ್ದಾರೆ. ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...