Wednesday, December 17, 2025
Wednesday, December 17, 2025

ಪಾಕಿಸ್ತಾನವು ಭಾರತದೊಂದಿಗೆ ಶಾಂತಿ- ಸಹಕಾರ ಬಯಸುತ್ತದೆ- ಶಹಬಾಜ್

Date:

ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಿದ್ದ ಮೊದಲ ದಿನವೇ ಕಾಶ್ಮೀರದ ಬೀದಿಗಳಲ್ಲಿ ರಕ್ತ ಹರಿಯುತ್ತಿದೆ ಎನ್ನುವ ಮೂಲಕ ಭಾರತವನ್ನು ಕೆಣಕಿದ್ದ ಶೆಹಬಾಜ್‌ ಷರೀಫ್ ನಿನ್ನೆ ಮೆತ್ತಗಾಗಿದ್ದಾರೆ.

ತಮಗೆ ಅಭಿನಂದನೆ ಸಲ್ಲಿಸಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಟ್ವೀಟ್‌ಗೆ ನಿನ್ನೆ. ಪ್ರತಿಕ್ರಿಯೆ ನೀಡಿರುವ ಶೆಹಬಾಜ್‌, ನಮ್ಮ ದೇಶವು ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರಯುತ ಸಂಬಂಧವನ್ನು ಬಯಸುತ್ತದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಎರಡೂ ದೇಶಗಳ ನಡುವೆ ಇರುವ ಎಲ್ಲ ಸಮಸ್ಯೆಗಳಿಗೂ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕಿದೆ. ಪಾಕಿಸ್ತಾನವೂ ಅದನ್ನೇ ಬಯಸುತ್ತದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನವು ಮಾಡುತ್ತಿರುವ ತ್ಯಾಗವು ಎಲ್ಲರಿಗೂ ಗೊತ್ತಿದೆ. ನಾವೀಗ ಶಾಂತಿ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯತ್ತ ಗಮನ ನೆಡಬೇಕಿದೆ ಎಂದು ಶೆಹಬಾಜ್‌ ಹೇಳಿದ್ದಾರೆ.

ಶೆಹಬಾಜ್‌ರಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದ ಪ್ರಧಾನಿ ಮೋದಿ, ಉಗ್ರವಾದ- ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಭಾರತ ಬಯಸುತ್ತದೆ ಎಂದಿದ್ದರು. ಇನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಟ್ವೀಟ್‌ ಮಾಡಿ, ಅಭಿನಂದನೆಯ ಜೊತೆಗೆ ಭಯೋತ್ಪಾದನೆ ಮಟ್ಟ ಹಾಕಿ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...