Sunday, December 7, 2025
Sunday, December 7, 2025

ಎಸ್ಎಸ್ಎಲ್ ಸಿ ಮೌಲ್ಯಮಾಪನ ಸಿಬ್ಬಂದಿ ಭತ್ಯೆ ಹೆಚ್ಚಳ

Date:

ಎಸ್‌ಎಸ್ ಎಲ್ ಸಿ ಮೌಲ್ಯ ಮಾಪಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪಕರ ಭತ್ಯೆಯನ್ನು ಶೇ.5 ರಷ್ಟು ಹೆಚ್ಚಳ ಮಾಡಿದೆ.

ಎಸ್‌ಎಸ್ ಎಲ್ ಸಿ ಮೌಲ್ಯಮಾಪನ ಕೇಂದ್ರಗಳ ಅಧೀಕ್ಷರ ಸಂಭಾವನೆ, ಮೌಲ್ಯಮಾಪಕರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ದರ ಮತ್ತು ವಿವಿಧ ಭತ್ಯೆಗಳನ್ನು ಶೇ.5 ರಷ್ಟು ಹೆಚ್ಚಳ ಮಾಡಿದೆ. ಪರಿಷ್ಕೃತ ದರದಲ್ಲಿ 6,924 ರೂ. ಇದ್ದ ಜಂಟಿ ಮುಖ್ಯ ಅಧೀಕ್ಷರ ಸಂಭಾವನೆಯನ್ನು 7,270 ರೂ.ಗೆ ಏರಿಕೆ ಮಾಡಲಾಗಿದೆ. ಉಪ ಮುಖ್ಯ ಅಧೀಕ್ಷಕರ ಸಂಭಾವನೆ ಇದುವರೆಗೆ 5,204 ರೂ. ಇತ್ತು.ಇದನ್ನು 5,464 ರೂ. ಗೆ ಹೆಚ್ಚಿಸಲಾಗಿದೆ.

ಮೌಲ್ಯಪಾಕರಿಗೆ ಪ್ರತಿ ಉತ್ತರ ಪತ್ರಿಕೆ ಮೌಲ್ಯಮಾಪನ ದರವನ್ನು ಒಂದು ರೂ. ನಷ್ಟು ಹೆಚ್ಚಿಸಲಾಗಿದೆ. ಇದರಿಂದ 22 ರೂ. ಇದ್ದ ಪ್ರಥಮ ಭಾಷೆ ಪತ್ರಿಕೆ ದರ 23 ರೂ. ದ್ವೀತಿಯ, ತೃತೀಯ ಭಾಷೆ ಮತ್ತು ಐಚ್ಛಿಕ ವಿಷಯಗಳಿಗೆ 20 ರೂ. ಇದ್ದ ಪ್ರತಿ ಉತ್ತರ ಪ್ರತಿಕೆಗಳ ಮೌಲ್ಯಮಾಪನ ದರ 21 ರೂ.ಗೆ ಹೆಚ್ಚಿಸಲಾಗಿದೆ. ಅದೇ ರೀತಿ ದಿನ ಭತ್ಯೆ ಬೆಂಗಳೂರಿನಲ್ಲಿ 596ರೂ. ಇತರೆ ನಗರಗಳಲ್ಲಿ 469 ರೂ. ಸ್ಥಳೀಯ ಭತ್ಯೆ ಬೆಂಗಳೂರಿಗೆ 223 ರೂ. ಇತರೆ ನಗರಗಳಲ್ಲಿ ಸ್ಥಳೀಯ ಭತ್ಯೆಯನ್ನು 180 ರೂ.ಗೆ ಹೆಚ್ಚಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...