Sunday, April 19, 2026
Sunday, April 19, 2026

ಅಡಿಕೆ ಮೇಲಿನ ಜಿಎಸ್ ಟಿ ದರ ಇಳಿಸಲು ಮನವಿ

Date:

ಅಡಿಕೆ ಮಾರುಕಟ್ಟೆಯಲ್ಲಿ ಸಮನ್ವಯ ಸಾಧಿಸಲು ಜಿಎಸ್‌ಟಿ ದರವನ್ನು ಶೇ.5ರಿಂದ ಶೇ 2ಕ್ಕೆ ಇಳಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್‌ಕುಮಾರ್ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ಅವರು, ಸಹಕಾರ ಸಂಸ್ಥೆಗಳು ಶೇ. 100ರಷ್ಟು ತೆರಿಗೆಯನ್ನು ಪಾವತಿಸುತ್ತವೆ.

ಇಡೀ ಅಡಿಕೆ ಮಾರುಕಟ್ಟೆಯಲ್ಲಿ ನಮ್ಮ ಪಾಲು ಶೇ.15ರಷ್ಟು ಇರುವುದರಿಂದ ಸಹಕಾರಿ ಸಂಘಗಳು ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಜಿಎಸ್‌ಟಿ ಇಳಿಕೆ ಮಾಡಬೇಕು ಎಂದು ವಿನಂತಿಸಿದ್ದಾರೆ.

ಬಾಕಿ ಇರುವ ಕೆಲಸಕ್ಕೆ ಆರ್ಥಿಕ ನೆರವಿನ ಅಗತ್ಯ ಇದೆ. 5 ಕೋಟಿ ರೂಪಾಯಿ ಮಂಜೂರು ಮಾಡಬೇಕು. ಅಡಿಕೆ ಹಳದಿ ರೋಗದಿಂದ ತೋಟ ನಾಶವಾಗಿರುವ ಸುಳ್ಯ, ಕೊಪ್ಪ ಮಡಿಕೇರಿ ಭಾಗದ ಬೆಳೆಗಾರರು ಸಹಕಾರಿ ಸಂಘಗಳಿಂದ ಪಡೆದ ಸಾಲ ಮನ್ನಾ ಮಾಡಿ, ಹೊಸ ಕೃಷಿ ಮಾಡಲು ಆರ್ಥಿಕ ಸಹಾಯ ನೀಡಬೇಕು. ಅಡಿಕೆ ಕೃಷಿಯಲ್ಲಿ ಕಾರ್ಮಿಕರ ಕೊರತೆಯಿದೆ.ಹೊಸತಾಗಿ ಮಾರುಕಟ್ಟೆಗೆ ಬಂದಿರುವ ಕಾರ್ಬನ್ ಫೈಬರ್ ದೋಟಿಯ ಕಸ್ಟಮ್ಸ್‌ ಸುಂಕವನ್ನು ಕಡಿಮೆ ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮನವಿಪತ್ರದಲ್ಲಿ ವಿನಂತಿಸಲಾಗಿದೆ.

ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಎಚ್‌.ಎಂ. ಕೃಷ್ಣಕುಮಾರ್, ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ ಇನ್ನೂ ಮುಂತಾದ ವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...