Thursday, May 21, 2026
Thursday, May 21, 2026

ಡಾ.ಅಂಬೇಡ್ಕರ್ ಓರ್ವ ವಿಶ್ವಮಾನವ -ಅಶ್ವತ್ಥನಾರಾಯಣ

Date:

ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಯಾವುದೇ ಪೂರ್ವಾಗ್ರಹವಿಲ್ಲದ ಪರಿಪೂರ್ಣ ತಿಳಿವಳಿಕೆ ಹೊಂದಿದ್ದ ಧೀಮಂತರಾಗಿದ್ದರು ಎಂದು ಉನ್ನತ ಶಿಕ್ಷಣ ಹಾಗೂ ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಸಾಗರ ತಾಲ್ಲೂಕು ಬಿಜೆಪಿ ಘಟಕ ಗುರುವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶೋಷಿತ ವರ್ಗದಲ್ಲಿ ಹುಟ್ಟಿದ ಅಂಬೇಡ್ಕರ್ ಅವರು ಪರಿಶ್ರಮದಿಂದ ಜ್ಞಾನಾರ್ಜನೆ ಮಾಡಿ ತಮ್ಮ ಪ್ರತಿಭೆಗೆ ಸಾಣೆ ಹಿಡಿದುಕೊಂಡಿದ್ದರು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್ ಅವರು ಶಿಕ್ಷಣ ತಜ್ಞರಾಗಿ, ವಕೀಲರಾಗಿ, ಆರ್ಥಿಕ ತಜ್ಞರಾಗಿ, ಪತ್ರಕರ್ತರಾಗಿ, ಸಮಾಜ ಸೇವಕರಾಗಿ, ಎಲ್ಲಾ ಧರ್ಮಗಳ ಬಗ್ಗೆ ತಿಳಿವಳಿಕೆ ಹೊಂದಿ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದರು. ನಮಗೆ ಸಂವಿಧಾನವನ್ನ ಕೊಟ್ಟ ಅವರು. ವಿಶ್ವಮಾನವರಾಗಿದ್ದರು ಎಂದು ವಿವರಿಸಿದರು.

ಅಂಬೇಡ್ಕರ್ ಅವರು ಶಿಕ್ಷಣದ ಬಲದಿಂದ ಹಾಗೂ ತಮಗಿದ್ದ ಸಮಾಜಪರ ಕಾಳಜಿಯಿಂದಾಗಿ ಇಡೀ ವಿಶ್ವಕ್ಕೆ ಪ್ರಸ್ತುತವಾದ ವ್ಯಕ್ತಿಯಾಗಿದ್ದರು. ಸದೃಢ ಸಮಾಜ ಕಟ್ಟುವ ನಿಟ್ಟಿನಲ್ಲಿ ನಾವು ನಮ್ಮ ನಮ್ಮ ನಡುವಿನ ಪೈಪೋಟಿಯನ್ನು ಬಿಟ್ಟು ಇಡೀ ಜಗತ್ತಿನೊಂದಿಗೆ ಸ್ಪರ್ಧೆ ಮಾಡಬೇಕು. ಉದ್ಯೋಗದಲ್ಲಿ, ಕೌಶಲದಲ್ಲಿ, ಶಿಕ್ಷಣದಲ್ಲಿ, ಉದ್ಯಮಶೀಲತೆಯಲ್ಲಿ ನಾವು ಸಾಧನೆ ಮಾಡಲು ಈಗ ಬೆಂಗಳೂರಿನಂತಹ ನಗರಕ್ಕೋ ಅಥವಾ ಅಮೆರಿಕದಂತಹ ದೇಶಕ್ಕೋ ಹೋಗಲೇಬೇಕು ಎಂದೇನೂ ಇಲ್ಲ. ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಇಲ್ಲಿದ್ದುಕೊಂಡೇ ಜಗತ್ತಿನ ಗಮನ ಸೆಳೆಯುವಂತಹ ಸಾಧನೆ ಮಾಡಿ ಅಭಿವೃದ್ಧಿ ಹೊಂದಬಹುದು ಎಂದು ಅಶ್ವತ್ಥನಾರಾಯಣ ನುಡಿದರು.

ಶಾಸಕ ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...

DC Shivamogga ಮೇ ಮತ್ತು ಜೂನ್ ತಿಂಗಳ ಪಡಿತರ ಅಕ್ಕಿ ವಿತರಣೆ ಮಾಹಿತಿ

DC Shivamogga ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2026ರ ಮೇ ಮತ್ತು...