Thursday, March 26, 2026
Thursday, March 26, 2026

ಮುಂದಿನ ಹತ್ತು ವರ್ಷಗಳಲ್ಲಿ ದೇಶದಲ್ಲಿ ವೈದ್ಯರ ಸಂಖ್ಯೆ ದಾಖಲೆ ಮಟ್ಟದಲ್ಲಿ ಹೆಚ್ಚಳ- ಮೋದಿ

Date:

ಇನ್ನು ಮುಂದಿನ 10 ವರ್ಷಗಳಲ್ಲಿ ದಾಖಲೆ ಮಟ್ಟದಲ್ಲಿ ಹೊಸ ವೈದ್ಯರನ್ನು ದೇಶ ಹೊಂದಲಿದೆ ಎಂದು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಗುಜರಾತ್‌ನ ಭುಜ್ ಜಿಲ್ಲೆಯಲ್ಲಿರುವ ಕೆಕೆ ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಿನ್ನೆ ಉದ್ಘಾಟನೆ ಮಾಡಿದ್ದಾರೆ.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಅವರು, ಕೇಂದ್ರ ಸರ್ಕಾರದ ಹೊಸ ನೀತಿಯ ಅನುಸಾರ ದೇಶದ ಪ್ರತಿಯೊಂದು ಜಿಲ್ಲೆಗಳಲ್ಲೂ ಕನಿಷ್ಟ ಒಂದು ವೈದ್ಯಕೀಯ ಕಾಲೇಜುಗಳನ್ನ ಸ್ಥಾಪಿಸುವ ಗುರಿ ಹೊಂದಿದೆ. ವೈದ್ಯಕೀಯ ಶಿಕ್ಷಣ ಎಲ್ಲರಿಗೂ ದೊರೆಯಬೇಕು ಎಂಬ ಉದ್ದೇಶದಿಂದ ಈ ಪ್ರಯತ್ನಕ್ಕೆ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಗುಜರಾತ್‌ ಎರಡು ದಶಕಗಳ ಹಿಂದೆ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಹೊಂದಿತ್ತು. ಅದರಲ್ಲಿ ಕೇವಲ 1100 ಸೀಟುಗಳು ಮಾತ್ರ ಇತ್ತು. ಆದರೆ, ಕಳೆದ 20 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಪ್ರಸ್ತುತ ಗುಜರಾತ್‌ನಲ್ಲಿ 36ಕ್ಕೂ ಅಧಿಕ ವೈದ್ಯಕೀಯ ಕಾಲೇಜುಗಳಿದೆ. ಪ್ರತಿವರ್ಷ 6000 ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಈ ಮೂಲಕ ಯುವಜನತೆಗೆ ವೈದ್ಯಕೀಯ ಶಿಕ್ಷಣವನ್ನು ಮುಕ್ತವಾಗಿ ಪಡೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆಯಲ್ಲಿ 2001ರಲ್ಲಿ ಉಂಟಾಗಿದ್ದ ಭೀಕರ ಭೂಕಂಪನದ ವಿನಾಶದ ಕುರಿತು ಪ್ರಧಾನಿ ಅವರು ನೆನಪು ಮಾಡಿಕೊಂಡರು. ಆಗಿನ ಸ್ಥಿತಿಯನ್ನು ಎದುರಿಸಿ ಭುಜ್ ಹಾಗೂ ಕಚ್‌ನ ಜನರು ತಮ್ಮ ಪರಿಶ್ರಮದಿಂದ ತಮ್ಮ ಪ್ರದೇಶವನ್ನು ಕಟ್ಟಿದ್ದಾರೆ ಎಂದು ಹೇಳಿದರು. ಭುಜ್ ನಲ್ಲಿ ಸ್ಥಾಪಿಸಿರುವ ವೈದ್ಯಕೀಯ ಆಸ್ಪತ್ರೆ ಜನರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಿದೆ ಎಂದು ಒತ್ತಿ ತಿಳಿಸಿದರು.

ಕೆಕೆ ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನ ಶ್ರೀ ಕುಟ್ಚಿ ಲೇವಾ ಪಟೇಲ್ ಸಮಾಜ ನಿರ್ಮಿಸಿದೆ. 200 ಹಾಸಿಗೆಯನ್ನು ಹೊಂದಿರುವ ಈ ಆಸ್ಪತ್ರೆಯಲ್ಲಿ ಬಡವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನ ಕಡಿಮೆ ದರದಲ್ಲಿ ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...