Saturday, March 28, 2026
Saturday, March 28, 2026

ಪಿಯುಸಿ ಪರೀಕ್ಷೆಗೆ ಬರುವವರಿಗೆ ಉಚಿತ ಬಸ್ ಪ್ರಯಾಣಕ್ಕೆ ಕೋರಿಕೆ

Date:

ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಗೆ ತೆರಳಲು, ಹಾಗೆ ಬರೆದು ವಾಪಾಸ್ ಹಿಂದಿರುಗಲು ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣಸಲು ಅವಕಾಶ ನೀಡಲಾಗಿತ್ತು.

ಆದರೆ ಈಗ ಇದೇ ಅವಕಾಶವನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ಗಳಿಗೂ ನೀಡಲಾಗುತ್ತಿದೆ. ಇದೇ ಏಪ್ರಿಲ್ ತಿಂಗಳ 22ರಿಂದ ಆರಂಭಗೊಳ್ಳುತ್ತಿರುವಂತ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಕಲ್ಪಿಸಿ ಕೊಡುವ ಯೋಜನೆ ನಡೆಯುತ್ತಿದೆ.

ಈ ಕುರಿತು ಕೆ ಎಸ್ ಆರ್ ಟಿ ಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ದಿನಾಂಕ 22-04-2022ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ.

ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಬೇಕಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕೋರಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆಯ ಹಿನ್ನಲೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆ ಎಸ್ ಆರ್ ಟಿ ಸಿ ಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ 22-04-2022 ರಿಂದ 18-05-2022ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಪರೀಕ್ಷೆ ಬರೆದು ಹಿಂದಿರುಗೋದಕ್ಕೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರೋದಾಗಿ ತಿಳಿಸಿದ್ದಾರೆ.

ಇನ್ನೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ತೆರಳುವಾಗ ನಿರ್ವಾಹಕರಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪರೀಕ್ಷೆಗೆ ತೆರಳಿ, ಆ ಬಳಿಕ ಮನೆಗೆ ವಾಪಾಸ್ ಆಗಬಹುದಾಗಿದೆ. ಅಲ್ಲದೇ ಬಸ್ಸು ತೆರಳುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು, ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ...