Saturday, February 7, 2026
Saturday, February 7, 2026

ಇನ್ನು ಮುಂದೆ ಎಲ್ಲೆಡೆ ಮೈಕ್ರೋ ಎಟಿಎಂ ಯಂತ್ರ ಒದಗಿಸಲಾಗುತ್ತದೆ- ಬಿ.ಎಸ್. ವೈ

Date:

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ವತಿಯಿಂದ ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿಗೆ ಮೈಕ್ರೋ ಎಟಿಎಂ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮವನ್ನು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನೆರವೇರಿಸಲಾಯಿತು.

ರಾಜ್ಯದ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವರು ಆಗಿರುವ ಶ್ರೀ ಕೆ ಸಿ ನಾರಾಯಣ ಗೌಡ್ರು ಸಹಕಾರ ಧ್ವಜಾರೋಹಣವನ್ನು ನೆರವೇರಿಸಿದರು.

ವಿಶೇಷ ಆಹ್ವಾನಿತರಾದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಮೈಕ್ರೋ ಎಟಿಎಂ ಮಿಷನ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕವಾಗಿ ನೂರು ಕೃಷಿ ಪತ್ತಿನ ಸಹಕಾರ ಸಂಘ ಆಯ್ಕೆ ಮಾಡಲಾಗಿದೆ ಎಂದು ಯಡಿಯೂರಪ್ಪ ಅವರು ತಿಳಿಸಿದರು.

ಮೊಬೈಲ್ ಬ್ಯಾಂಕಿಂಗ್ ಸೇವಾ ಸೌಲಭ್ಯಗಳನ್ನು ಜಾರಿಗೊಳಿಸಲಾಗುತ್ತದೆ. ಮೊಬೈಲ್ ಅಪ್ಲಿಕೇಶನ್ ತರುವ ನಿಟ್ಟಿನಲ್ಲಿ ಬ್ಯಾಂಕಿಂಗ್ ವ್ಯವಹಾರಗಳನ್ನೂ ಜಾರಿಗೊಳಿಸಲಾಗುತ್ತದೆ. ರೈತರಿಗೆ ಹಾಗೂ ಸ್ವಸಹಾಯ ಸಂಘದ ಮನೆಬಾಗಿಲಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ ಎಂದು ಯಡಿಯೂರಪ್ಪ ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಸೊರಬ ತಾಲೂಕಿನಲ್ಲಿ ಒಂದು, ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ, ಭದ್ರಾವತಿ ತಾಲೂಕಿನ ಕಲ್ಲಿ ಹಾಳ್ ಗ್ರಾಮದಲ್ಲಿ ಹೊಸ ಮೂರು ಮುಖ್ಯ ಶಾಖೆಯನ್ನು ತೆರೆಯುವ ಯೋಜನೆ ಹಮ್ಮಿಕೊಂಡಿದ್ದೇವೆ
ಎಂದು ತಿಳಿಸಿದರು.

ರಾಜ್ಯದ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ ಅವರು ಮಾತನಾಡಿ, ಸಾವಿರದ ಒಂಬೈನೂರ 61 ರಲ್ಲಿ ಅತ್ಯಂತ ಬಡತನದಲ್ಲಿ ನನ್ನ ಕುಟುಂಬ ಇತ್ತು. ಒಂದು ಹೊತ್ತಿನ ಊಟಕ್ಕೂ ಕಷ್ಟ ಇದ್ದಂತಹ ಕಾಲ ಅದಾಗಿತ್ತು. ಬೆಳೆದಿದ್ದೆಲ್ಲ ಸಾಲ ಕೊಟ್ಟವರಿಗೆ ಮಾರಿ ನಾವು ಮುಳುಗಿ ಹೋಗ್ತಾ ಇದ್ವಿ. ಈ ಸಂದರ್ಭದಲ್ಲಿ ನಮಗೆ ಡಿಸಿಸಿ ಬ್ಯಾಂಕ್ ಆರಗ ಸೊಸೈಟಿ ಸಾಲ ಕೊಟ್ಟಿತ್ತು ಎಂದು ಡಿಸಿಸಿ ಬ್ಯಾಂಕಿನ ಬಗ್ಗೆ ಹರ್ಷವನ್ನು ವ್ಯಕ್ತಪಡಿಸಿದರು.

ಪ್ರಸ್ತುತ ಸಂದರ್ಭದಲ್ಲಿ 23 ಕೋಟಿ 26 ಲಕ್ಷ ಲಾಭಗಳಿಸಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. 4. 21% ರಸ್ತು ತಿಳಿದಿದೆ ಎನ್ನುವ ಸಂಭ್ರಮಕ್ಕಾಗಿ ನಾವಿಂದು ಬಂದಿದ್ದೇವೆ. ಠೇವಣಿ ಮತ್ತು ಸಾಲ 244 ಕೋಟಿ ಬ್ಯಾಂಕ್ ನಂಬಿ ಜನ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಲೋಕಸಭೆ ಶಿವಮೊಗ್ಗ ಕ್ಷೇತ್ರ ಸಂಸದರಾದ ಬಿ .ವೈ.
ರಾಘವೇಂದ್ರ ಅವರು ಮಾತನಾಡಿ, ಇಲ್ಲಿ ವಿಶೇಷವಾದ ಸಮಾರಂಭ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಅನೇಕ ವರ್ಷಗಳ ಇತಿಹಾಸ ವಿದೆ. ಇತಿಹಾಸಕ್ಕೆ ಶಕ್ತಿ ತುಂಬಿದಂತಹ ನಮ್ಮ ಶಿವಮೊಗ್ಗ ಕ್ಷೇತ್ರದ ದಿ. ರುದ್ರಪ್ಪ ನವರ ಕೊಡುಗೆ ಅಪಾರ ಎಂದರು.

ಇಡೀ ರಾಜ್ಯದಲ್ಲಿಯೇ ಮೊದಲ ಬಾರಿಗೆ ನಮ್ಮ ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಈ ಕಾರ್ಯಕ್ರಮ ನಡೆಯುತ್ತಿದೆ. ಇದು ಹೆಮ್ಮೆಯ ವಿಚಾರ ಎಂದರು.

ದೇಶದಲ್ಲಿ ಹಿಂದುಳಿದ ಜನರಿಗೆ ಆರ್ಥಿಕ ಬೆಂಬಲ ಸಿಕ್ಕಿರುವುದು ಸಹಕಾರಿ ಕ್ಷೇತ್ರದಿಂದ ಎಂದು ಬಿವೈ ರಾಘವೇಂದ್ರ ಅವರು ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಹರತಾಳು ಹಾಲಪ್ಪ, ಕೆ ಪಿ ಅಶೋಕ್ ನಾಯಕ್ ವಿಧಾನಸಭೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಾಸಕರು, ಶ್ರೀ ಆಯನೂರು ಮಂಜುನಾಥ ವಿಧಾನಪರಿಷತ್ ಸದಸ್ಯರು, ಶ್ರೀ ಎಸ್ ರುದ್ರೆ ಗೌಡರು ವಿಧಾನಪರಿಷತ್ ಶಾಸಕರು, ಇನ್ನು ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...