Monday, August 24, 2026
Monday, August 24, 2026

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆ.ಜ.ಮನೋಜ್ ಪಾಂಡೆ ನೇಮಕ

Date:

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆಯವರು ನೇಮಕಗೊಂಡಿದ್ದಾರೆ.

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು.

ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು.

ಈಗಿರುವ ಜನರಲ್​ ಮನೋಜ್​ ಮುಕುಂದ್ ನರವಾನೆಯವರ 28 ತಿಂಗಳ ಅಧಿಕಾರ ಅವಧಿ ಏಪ್ರಿಲ್ 30ಕ್ಕೆ ಅಂತ್ಯಗೊಳ್ಳಲಿರುವ ಈ ಹಿನ್ನೆಲೆಯಲ್ಲಿ ಮನೋಜ್ ಪಾಂಡೆಯವರನ್ನ ನೇಮಕಮಾಡಲಾಗಿದೆ.

ಇವರು ಭಾರತೀಯ ಸೇನೆಯ 29ನೇ ಮುಖ್ಯಸ್ಥರಾಗಿದ್ದಾರೆ. ಇದೀಗ ಮನೋಜನ್​ ಪಾಂಡೆ ಮುಂದಿನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದನ್ನು ಭಾರತೀಯ ರಕ್ಷಣಾ ಇಲಾಖೆ ಘೋಷಣೆ ಮಾಡಿದೆ.

ಇದರೊಂದಿಗೆ ಮನೋಜ್​ ಪಾಂಡೆಯವರು ಕಾರ್ಪ್​ ಆಫ್​ ಇಂಜಿನಿಯರ್​ ವಿಭಾಗದಿಂದ ಸೇನಾ ಮುಖ್ಯಸ್ಥರಾದ ಮೊದಲ ಅಧಿಕಾರಿ ಎನ್ನುವುದು ಗಮನಾರ್ಹ.

ಆಪರೇಶನ್​ ಪರಾಕ್ರಮ ಎಂಬುದು 2002ರ ಹೊತ್ತಿಗೆ ನಡೆದ ಒಂದು ಕಾರ್ಯಾಚರಣೆ. 2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸೃಷ್ಟಿಯಾಗುವ ಸನ್ನಿವೇಶವನ್ನು ತಂದಿತ್ತು. ಆ ವೇಳೆ ಪಶ್ಚಿಮದ ಗಡಿಗೆ ಭಾರತೀಯ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸಿತ್ತು.

ಮನೋಜ್​ ಪಾಂಡೆ ತಮ್ಮ 39 ವರ್ಷಗಳ ಸೇನಾ ವೃತ್ತಿಯಲ್ಲಿ ಪಶ್ಚಿಮದ ಗಡಿಯ ಇಂಜಿನಿಯರ್​ ಬ್ರಿಗೇಡ್​, ಎಲ್​ಒಸಿ ಬಳಿ ಪದಾತಿ ದಳ, ಲಡಾಖ್​ ವಲಯದಲ್ಲಿ ಪರ್ವತ ವಿಭಾಗದ ದಳ ಮತ್ತು ಈಶಾನ್ಯದ ಗಡಿಯಲ್ಲೂ ಒಂದು ಕಾರ್ಪ್ಸ್​​ನ್ನು ಮುನ್ನಡೆಸಿದ್ದಾರೆ.

ಹಾಗೇ, ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನೂ ಅಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಕಾರ್ಪ್ಸ್​ ಆಫ್​ ಇಂಜಿನಿಯರ್​​ ರೆಜಿಮೆಂಟ್​ನ್ನು ಮನೋಜ್ ಪಾಂಡೆ ಮುನ್ನಡೆಸಿದ್ದರು.

ಪೂರ್ವ ಕಮಾಂಡ್‌ನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...