ಅಂತಾರಾಷ್ಟ್ರೀಯ ಹಣಕಾಸು ನಿಧಿ ವ್ಯವಸ್ಥಾಪಕ ನಿರ್ದೇಶಕಿಯಾದ ಕ್ರಿಸ್ಟಲಿನಾ ಜಾರ್ಜಿವಾ ಅವರು ನಿನ್ನೆ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟುಗಳನ್ನು ನಿಭಾಯಿಸಲು ಭಾರತದ ಸಹಾಯವನ್ನು ಶ್ಲಾಘಿಸಿದ್ದಾರೆ.
ಜೊತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದ್ವೀಪ ರಾಷ್ಟ್ರದೊಂದಿಗೆ ಹಣಕಾಸು ಸಂಸ್ಥೆಯು ಸಕ್ರಿಯವಾಗಿ ತೊಡಗಿಸಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಭರವಸೆ ಯನ್ನು ನೀಡಿದ್ದಾರೆ.
ಸೀತಾರಾಮನ್ ಅವರೊಂದಿಗೆ ವಾಷಿಂಗ್ಟನ್ ಡಿಸಿ ಯಲ್ಲಿ ಐ ಎಮ್ ಎಫ್ ವಿಶ್ವ ಬ್ಯಾಂಕ್ ನ ಸಭೆಗಳ ಸಂದರ್ಭದಲ್ಲಿ ಜಾರ್ಜಿವಾ ಈ ಹೇಳಿಕೆಗಳನ್ನು ನೀಡಿದ್ದಾರೆ. ಇತ್ತೀಚಿನ ಭೌಗೋಳಿಕ ರಾಜಕೀಯ ಬೆಳವಣಿಗೆಗಳನ್ನು ಚರ್ಚಿಸುತ್ತಾ, ಸೀತಾರಾಮನ್ ಮತ್ತು ಜಾರ್ಜಿವಾ ಜಾಗತಿಕ ಆರ್ಥಿಕತೆಯ ಮೇಲೆ ಅದರ ಪ್ರಭಾವ ಮತ್ತು ಏರುತ್ತಿರುವ ಇಂಧನ ಬೆಲೆಗಳಿಗೆ ಸಂಬಂಧಿಸಿದ ಸವಾಲುಗಳ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.
ಆಹಾರ ಮತ್ತು ಇಂಧನ ಕೊರತೆ, ಗಗನಕ್ಕೇರುತ್ತಿರುವ ಬೆಲೆಗಳು ಮತ್ತು ವಿದ್ಯುತ್ ಕಡಿತದಿಂದ ಹೆಚ್ಚಿನ ಸಂಖ್ಯೆಯ ಜನರ ಮೇಲೆ ಪರಿಣಾಮ ಬೀರುವ ಮೂಲಕ ಸ್ವಾತಂತ್ರ್ಯದ ನಂತರ ಶ್ರೀಲಂಕಾ ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ.
ಇದರ ಪರಿಣಾಮವಾಗಿ ಸರ್ಕಾರವು ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ಭಾರಿ ಪ್ರತಿಭಟನೆಗಳು ನಡೆದಿವೆ.
ಕೊರೋನಾ ಹರಡುವಿಕೆಯನ್ನು ನಿಯಂತ್ರಿಸಲು ಭಾರತವು ತನ್ನ ಯಶಸ್ವಿ ಲಸಿಕೆ ಕಾರ್ಯಕ್ರಮಕ್ಕಾಗಿ ಜಾರ್ಜಿವಾ ಅವರು ಭಾರತಕ್ಕೆ ಅಭಿನಂದಿಸಿದರು. ಹಣಕಾಸು ಸಚಿವಾಲಯದ ಪ್ರಕಾರ, ಇತರ ದುರ್ಬಲ ದೇಶಗಳಿಗೆ ಕೊರೋನಾ ಪರಿಹಾರ ಬೆಂಬಲವನ್ನು ವಿಸ್ತರಿಸಿದ್ದಕ್ಕಾಗಿ ಅವರು ಭಾರತವನ್ನು ಶ್ಲಾಘಿಸಿದ್ದಾರೆ.
ಸಚಿವಾಲಯದ ಪ್ರಕಾರ, ಜಾರ್ಜಿವಾ ಅವರು ಭಾರತದ ಆರ್ಥಿಕತೆಯು ಚೇತರಿಸಿಕೊಳ್ಳಲು ಸಹಾಯ ಮಾಡಿದ ಭಾರತದ ಉತ್ತಮ ಗುರಿಯ ನೀತಿ ಮಿಶ್ರಣವನ್ನು ಶ್ಲಾಘಿಸಿದ್ದಾರೆ.