Tuesday, August 25, 2026
Tuesday, August 25, 2026

ಕಾರು ಅಪಘಾತ ಜಿಲ್ಲಾಧಿಕಾರಿ ಪಾರು

Date:

ರಾಜ್ಯದ ಸಾವಿನ ಹೆದ್ದಾರಿ ಎಂದೆ ಪ್ರಖ್ಯಾತಿ ಪಡೆದಿರುವ ಹುಬ್ಬಳ್ಳಿ ,ಧಾರವಾಡ ಬೈಪಾಸ್ ರಸ್ತೆ ಮತ್ತೆ ಈಗ ಸುದ್ದಿಯಾಗಿದೆ. ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯಿದ್ದ ಕಾರು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಎಂದರೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಅವರ ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವೀಣ ಕುಮಾರ ಕಾರಿನಲ್ಲಿ ಇದ್ದರು. ಈ ಘಟನೆ ಸುಮಾರು ಬೆಳಗಿನ ಜಾವ 5.30ರ ಸರಿಸುಮಾರಿಗೆ ನಡೆದಿದೆ.

ಘಟನೆ ನಡೆದ ನಂತರ ಎಲ್ಲರನ್ನೂ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಸ್ತುತ ಸಂದರ್ಭದಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ದಾವಣಗೆರೆ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ದಾನಮ್ಮನವರ ಅವರ ವರ್ಗಾವಣೆ ಆದೇಶ ನಿನ್ನೆಯಷ್ಟೇ ಬಂದಿತ್ತು. ವಿಜಯಪುರ ಜಿಲ್ಲಾಧಿಕಾರಿಯಾಗಲು ಹೊರಟಿದ್ದ ಸಮಯದಲ್ಲಿಯೇ ಈ ದುರ್ಘಟನೆ ನಡೆದಿದೆ.

ಯರಿಕೊಪ್ಪ ಕ್ರಾಸ್ ಬಳಿಯಲ್ಲಿ ಎದುರಿಗೆ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...