Tuesday, December 16, 2025
Tuesday, December 16, 2025

ದೇಶದ ಎಲ್ಲಾ ತಾಲ್ಲೂಕುಗಳಲ್ಲಿವಿಶೇಷ ಆರೋಗ್ಯ ಶಿಬಿರ- ಡಾ.ಸುಧಾಕರ್

Date:

ಪ್ರಧಾನ ಮಂತ್ರಿಗಳ ಆಶಯ ಮತ್ತು ಕೇಂದ್ರ ಆರೋಗ್ಯ ಸಚಿವರ ಕ್ರಿಯಾಶೀಲತೆಯಿಂದ ದೇಶದ ಎಲ್ಲಾ ತಾಲ್ಲೂಕಿನಲ್ಲಿ ವಿಶೇಷ ಆರೋಗ್ಯ ಶಿಬಿರ ಹಮ್ಮಿಕೊಂಡಿರುತ್ತದೆ.

ಇತಿಹಾಸದಲ್ಲೆ ಮೊದಲು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನ ಕಲ್ಲು ಕಟ್ಟಡದಲ್ಲಿ ನಡೆದ ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಮತ್ತು ತಪಾಸಣಾ ಶಿಬಿರವನ್ನು ಪರಿಶೀಲಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ಶಿಬಿರವನ್ನು ನಡೆಸಿ ಸಾರ್ವಜನಿಕರ ಆರೋಗ್ಯದಲ್ಲಿ ತೊಂದರೆಯಿದ್ದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಾ. ಕೆ. ಸುಧಾಕರ್ ಅವರು ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಇದ್ದರೆ ಆರೋಗ್ಯದಲ್ಲಿ ಏರುಪೇರಾದರೆ ಸರ್ಕಾರಿ ಆಸ್ಪತ್ರೆಯಾಗಲಿ ಅಥವಾ ಸರಕಾರದಿಂದ ದಾಖಲಿಸಿದ ಯಾವುದೇ ಉನ್ನತಮಟ್ಟದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವ್ಯವಸ್ಥೆ ಇದೆ.
ಒಂದು ಬಾರಿ ಈ ಕಾರ್ಡ್ ಮಾಡಿಸಿದರೆ ಜೀವನ ಪೂರ್ತಿ ಕಾರ್ಡ್ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಇರುವಂತಹ ಎಲ್ಲಾ ಜನರಿಗೂ ಸಹ ಈ ಕಾರ್ಡನ್ನು ಉಚಿತವಾಗಿ ನೀಡಬೇಕೆಂದು ತಿಳಿಸಿದ್ದಾರೆ.

ಒಂದು ಆರೋಗ್ಯ ಶಿಬಿರಕ್ಕೆ 2 ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಎಲ್ಲಾ ಸೌಲಭ್ಯವನ್ನು ಒಳಗೊಂಡಂತಹ ಆರೋಗ್ಯ ಶಿಬಿರವನ್ನು ಮಂಡ್ಯದಲ್ಲಿ ನಡೆಯುತ್ತಿರುವುದು ಬಹಳ ಶ್ಲಾಘನೀಯ ವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಈ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಸಹ ವಿಶೇಷವಾಗಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಬೇಕು ಹಾಗೆ ಜನರಿಗೆ ಶಿಬಿರದ ಬಗ್ಗೆ ಇನ್ನಷ್ಟು ಜಾಗೃತಿಯನ್ನು ನೀಡಬೇಕು ಎಂದು ಸೂಚಿಸಿದರು. ಇದೇ ವೇಳೆ ಶ್ರವಣದೋಷವುಳ್ಳ ಮಕ್ಕಳಿಗೆ ಶ್ರವಣ ಸಾಧನ ಪರಿಕರಗಳಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿ, ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಜಿ.ಆರ್.ಜೆ ದಿವ್ಯಪ್ರಭು, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ಟಿ.ಎನ್.ಧನಂಜಯ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ಸಂಜಯ್ ಟಿ.ಹೆಚ್.ಒ ಡಾ.ಜವರೇಗೌಡ,ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...