Friday, March 27, 2026
Friday, March 27, 2026

ದೇಶದ ಎಲ್ಲಾ ತಾಲ್ಲೂಕುಗಳಲ್ಲಿವಿಶೇಷ ಆರೋಗ್ಯ ಶಿಬಿರ- ಡಾ.ಸುಧಾಕರ್

Date:

ಪ್ರಧಾನ ಮಂತ್ರಿಗಳ ಆಶಯ ಮತ್ತು ಕೇಂದ್ರ ಆರೋಗ್ಯ ಸಚಿವರ ಕ್ರಿಯಾಶೀಲತೆಯಿಂದ ದೇಶದ ಎಲ್ಲಾ ತಾಲ್ಲೂಕಿನಲ್ಲಿ ವಿಶೇಷ ಆರೋಗ್ಯ ಶಿಬಿರ ಹಮ್ಮಿಕೊಂಡಿರುತ್ತದೆ.

ಇತಿಹಾಸದಲ್ಲೆ ಮೊದಲು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನ ಕಲ್ಲು ಕಟ್ಟಡದಲ್ಲಿ ನಡೆದ ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಮತ್ತು ತಪಾಸಣಾ ಶಿಬಿರವನ್ನು ಪರಿಶೀಲಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ಶಿಬಿರವನ್ನು ನಡೆಸಿ ಸಾರ್ವಜನಿಕರ ಆರೋಗ್ಯದಲ್ಲಿ ತೊಂದರೆಯಿದ್ದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಾ. ಕೆ. ಸುಧಾಕರ್ ಅವರು ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಇದ್ದರೆ ಆರೋಗ್ಯದಲ್ಲಿ ಏರುಪೇರಾದರೆ ಸರ್ಕಾರಿ ಆಸ್ಪತ್ರೆಯಾಗಲಿ ಅಥವಾ ಸರಕಾರದಿಂದ ದಾಖಲಿಸಿದ ಯಾವುದೇ ಉನ್ನತಮಟ್ಟದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವ್ಯವಸ್ಥೆ ಇದೆ.
ಒಂದು ಬಾರಿ ಈ ಕಾರ್ಡ್ ಮಾಡಿಸಿದರೆ ಜೀವನ ಪೂರ್ತಿ ಕಾರ್ಡ್ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಇರುವಂತಹ ಎಲ್ಲಾ ಜನರಿಗೂ ಸಹ ಈ ಕಾರ್ಡನ್ನು ಉಚಿತವಾಗಿ ನೀಡಬೇಕೆಂದು ತಿಳಿಸಿದ್ದಾರೆ.

ಒಂದು ಆರೋಗ್ಯ ಶಿಬಿರಕ್ಕೆ 2 ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಎಲ್ಲಾ ಸೌಲಭ್ಯವನ್ನು ಒಳಗೊಂಡಂತಹ ಆರೋಗ್ಯ ಶಿಬಿರವನ್ನು ಮಂಡ್ಯದಲ್ಲಿ ನಡೆಯುತ್ತಿರುವುದು ಬಹಳ ಶ್ಲಾಘನೀಯ ವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಈ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಸಹ ವಿಶೇಷವಾಗಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಬೇಕು ಹಾಗೆ ಜನರಿಗೆ ಶಿಬಿರದ ಬಗ್ಗೆ ಇನ್ನಷ್ಟು ಜಾಗೃತಿಯನ್ನು ನೀಡಬೇಕು ಎಂದು ಸೂಚಿಸಿದರು. ಇದೇ ವೇಳೆ ಶ್ರವಣದೋಷವುಳ್ಳ ಮಕ್ಕಳಿಗೆ ಶ್ರವಣ ಸಾಧನ ಪರಿಕರಗಳಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿ, ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಜಿ.ಆರ್.ಜೆ ದಿವ್ಯಪ್ರಭು, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ಟಿ.ಎನ್.ಧನಂಜಯ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ಸಂಜಯ್ ಟಿ.ಹೆಚ್.ಒ ಡಾ.ಜವರೇಗೌಡ,ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...